ಬ್ರೇಕಿಂಗ್ ನ್ಯೂಸ್
06-02-23 05:39 pm Mangalore Correspondent ಕರಾವಳಿ
ಮಂಗಳೂರು, ಫೆ.6 : ನಾವು ನರೇಂದ್ರ ಮೋದಿಯಂತೆ ಸುಳ್ಳು ಹೇಳುವುದಿಲ್ಲ. ಯಾರೊಬ್ಬರ ಖಾತೆಗೂ 15 ಲಕ್ಷ ಹಣ ಬಂದಿಲ್ಲ. ಜನಧನ್ ಖಾತೆಗೆ ಈವರೆಗೂ 500 ರೂ. ಬಂದಿಲ್ಲ. ಮೋದಿ ಎಲ್ಲ ಹಣವನ್ನು ಅದಾನಿಗೆ ನೀಡಿದ್ದಾರೆ. ಅದಾನಿ 75 ಸಾವಿರ ಕೋಟಿ ರೂಪಾಯಿ ಮೋದಿಯಿಂದ ಪಡೆದು ಗುಳುಂ ಮಾಡಿದ್ದಾನೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.
ಮೂಲ್ಕಿ - ಮೂಡಬಿದರೆ ವಿಧಾನಸಭಾ ಕ್ಷೇತ್ರದ ಮುಲ್ಕಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಹರಿಪ್ರಸಾದ್ ಹರಿತ ಮಾತುಗಳಿಂದ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಬಡವರ ಪರ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿಲ್ಲ. ತಮ್ಮ ಸ್ನೇಹಿತರನ್ನು ದೊಡ್ಡ ಉದ್ಯಮಿಗಳಾಗಿಸಲು ಮಾತ್ರ ಯೋಜನೆ ಹಮ್ಮಿಕೊಳ್ಳುತ್ತಿದ್ದಾರೆ. ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಜನಸಾಮಾನ್ಯರಿಗೆ ಮನೆ ನಡೆಸುವುದಕ್ಕೂ ಸಂಕಷ್ಟ ಎದುರಾಗುತ್ತಿದೆ. ಆದರೆ ಕಾಂಗ್ರೆಸ್ ಯಾವತ್ತೂ ಬಡವರ ಪರ ಇದೆ ಎನ್ನುವುದನ್ನು ನಿರೂಪಿಸುತ್ತಿದ್ದೇವೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಮನೆ ನಡೆಸುವ ಪ್ರತಿ ಮಹಿಳೆಗೂ ತಿಂಗಳಲ್ಲಿ 2000 ರೂ. ಕೊಡಲಾಗುವುದು. ಈ ಯೋಜನೆಯಲ್ಲಿ ಬಡವರು, ಶ್ರೀಮಂತ, ನಿರ್ಗತಿಕ ಅಂತ ವ್ಯತ್ಯಾಸ ಇಲ್ಲ. ಮನೆ ನಡೆಸುವ ಪ್ರತಿ ಯಜಮಾನಿಗೂ ತಿಂಗಳಿಗೆ 2 ಸಾವಿರ ರೂ. ಕೊಡಲಾಗುವುದು. ವರ್ಷಕ್ಕೆ 24 ಸಾವಿರ ರೂಪಾಯಿ ನೀಡಲಾಗುವುದು ಎಂದು ಹೇಳಿದರು.
ಕರಾವಳಿಯಲ್ಲಿ ಶಾಂತಿ ಕದಡುವ ಹೇಳಿಕೆಗಳನ್ನು ನೀಡಿ ದಾರಿ ತಪ್ಪಿಸಲಾಗುತ್ತಿದೆ. ಇಲ್ಲಿನ ದೇವಾಲಯಗಳ ಉತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬ್ಯಾನರ್ ಹಾಕಲಾಗುತ್ತಿದೆ. ಮುಲ್ಕಿಯ ದುರ್ಗಾಪರಮೇಶ್ವರಿ ದೇವಾಲಯವನ್ನು 12ನೇ ಶತಮಾನದಲ್ಲಿ ಬಪ್ಪಬ್ಯಾರಿ ಕಟ್ಟಿಸಿದ ಇತಿಹಾಸ ಇದೆ. ಬಪ್ಪ ಬ್ಯಾರಿ ಯಾರು? ಮುಸ್ಲಿಂ ವ್ಯಕ್ತಿ ಕಟ್ಟಿಸಿದ ದೇವಾಲಯಕ್ಕೆ ಹಿಂದುಗಳು ಹೋಗಬಾರದು ಎಂದು ಹೇಳುವ ಧೈರ್ಯವಿದೆಯೆ? ಇತಿಹಾಸವನ್ನು ತಿರುಚಿ ಜನರ ಭಾವನೆ ಕೆರಳಿಸುವ ಕೆಲಸ ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ. ಮಕ್ಕಳ ಮನಸ್ಸನ್ನು ಕೆರಳಿಸಲಾಗುತ್ತಿದೆ. ಮಕ್ಕಳ ಕೈಯಲ್ಲಿ ಚಾಕು ಚೂರಿ ನೀಡಿ ಭಯೋತ್ಪಾದಕರನ್ನು ಮಾಡಲು ಹೊರಟಿದ್ದಾರೆ ಎಂದು ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
Adani has eaten 75 thousand crores of Modi slams BK Hariprasad in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am