ಬ್ರೇಕಿಂಗ್ ನ್ಯೂಸ್
06-02-23 05:39 pm Mangalore Correspondent ಕರಾವಳಿ
ಮಂಗಳೂರು, ಫೆ.6 : ನಾವು ನರೇಂದ್ರ ಮೋದಿಯಂತೆ ಸುಳ್ಳು ಹೇಳುವುದಿಲ್ಲ. ಯಾರೊಬ್ಬರ ಖಾತೆಗೂ 15 ಲಕ್ಷ ಹಣ ಬಂದಿಲ್ಲ. ಜನಧನ್ ಖಾತೆಗೆ ಈವರೆಗೂ 500 ರೂ. ಬಂದಿಲ್ಲ. ಮೋದಿ ಎಲ್ಲ ಹಣವನ್ನು ಅದಾನಿಗೆ ನೀಡಿದ್ದಾರೆ. ಅದಾನಿ 75 ಸಾವಿರ ಕೋಟಿ ರೂಪಾಯಿ ಮೋದಿಯಿಂದ ಪಡೆದು ಗುಳುಂ ಮಾಡಿದ್ದಾನೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.
ಮೂಲ್ಕಿ - ಮೂಡಬಿದರೆ ವಿಧಾನಸಭಾ ಕ್ಷೇತ್ರದ ಮುಲ್ಕಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಹರಿಪ್ರಸಾದ್ ಹರಿತ ಮಾತುಗಳಿಂದ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಬಡವರ ಪರ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿಲ್ಲ. ತಮ್ಮ ಸ್ನೇಹಿತರನ್ನು ದೊಡ್ಡ ಉದ್ಯಮಿಗಳಾಗಿಸಲು ಮಾತ್ರ ಯೋಜನೆ ಹಮ್ಮಿಕೊಳ್ಳುತ್ತಿದ್ದಾರೆ. ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಜನಸಾಮಾನ್ಯರಿಗೆ ಮನೆ ನಡೆಸುವುದಕ್ಕೂ ಸಂಕಷ್ಟ ಎದುರಾಗುತ್ತಿದೆ. ಆದರೆ ಕಾಂಗ್ರೆಸ್ ಯಾವತ್ತೂ ಬಡವರ ಪರ ಇದೆ ಎನ್ನುವುದನ್ನು ನಿರೂಪಿಸುತ್ತಿದ್ದೇವೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಮನೆ ನಡೆಸುವ ಪ್ರತಿ ಮಹಿಳೆಗೂ ತಿಂಗಳಲ್ಲಿ 2000 ರೂ. ಕೊಡಲಾಗುವುದು. ಈ ಯೋಜನೆಯಲ್ಲಿ ಬಡವರು, ಶ್ರೀಮಂತ, ನಿರ್ಗತಿಕ ಅಂತ ವ್ಯತ್ಯಾಸ ಇಲ್ಲ. ಮನೆ ನಡೆಸುವ ಪ್ರತಿ ಯಜಮಾನಿಗೂ ತಿಂಗಳಿಗೆ 2 ಸಾವಿರ ರೂ. ಕೊಡಲಾಗುವುದು. ವರ್ಷಕ್ಕೆ 24 ಸಾವಿರ ರೂಪಾಯಿ ನೀಡಲಾಗುವುದು ಎಂದು ಹೇಳಿದರು.
ಕರಾವಳಿಯಲ್ಲಿ ಶಾಂತಿ ಕದಡುವ ಹೇಳಿಕೆಗಳನ್ನು ನೀಡಿ ದಾರಿ ತಪ್ಪಿಸಲಾಗುತ್ತಿದೆ. ಇಲ್ಲಿನ ದೇವಾಲಯಗಳ ಉತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬ್ಯಾನರ್ ಹಾಕಲಾಗುತ್ತಿದೆ. ಮುಲ್ಕಿಯ ದುರ್ಗಾಪರಮೇಶ್ವರಿ ದೇವಾಲಯವನ್ನು 12ನೇ ಶತಮಾನದಲ್ಲಿ ಬಪ್ಪಬ್ಯಾರಿ ಕಟ್ಟಿಸಿದ ಇತಿಹಾಸ ಇದೆ. ಬಪ್ಪ ಬ್ಯಾರಿ ಯಾರು? ಮುಸ್ಲಿಂ ವ್ಯಕ್ತಿ ಕಟ್ಟಿಸಿದ ದೇವಾಲಯಕ್ಕೆ ಹಿಂದುಗಳು ಹೋಗಬಾರದು ಎಂದು ಹೇಳುವ ಧೈರ್ಯವಿದೆಯೆ? ಇತಿಹಾಸವನ್ನು ತಿರುಚಿ ಜನರ ಭಾವನೆ ಕೆರಳಿಸುವ ಕೆಲಸ ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ. ಮಕ್ಕಳ ಮನಸ್ಸನ್ನು ಕೆರಳಿಸಲಾಗುತ್ತಿದೆ. ಮಕ್ಕಳ ಕೈಯಲ್ಲಿ ಚಾಕು ಚೂರಿ ನೀಡಿ ಭಯೋತ್ಪಾದಕರನ್ನು ಮಾಡಲು ಹೊರಟಿದ್ದಾರೆ ಎಂದು ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
Adani has eaten 75 thousand crores of Modi slams BK Hariprasad in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm