ಬ್ರೇಕಿಂಗ್ ನ್ಯೂಸ್
06-02-23 05:39 pm Mangalore Correspondent ಕರಾವಳಿ
ಮಂಗಳೂರು, ಫೆ.6 : ನಾವು ನರೇಂದ್ರ ಮೋದಿಯಂತೆ ಸುಳ್ಳು ಹೇಳುವುದಿಲ್ಲ. ಯಾರೊಬ್ಬರ ಖಾತೆಗೂ 15 ಲಕ್ಷ ಹಣ ಬಂದಿಲ್ಲ. ಜನಧನ್ ಖಾತೆಗೆ ಈವರೆಗೂ 500 ರೂ. ಬಂದಿಲ್ಲ. ಮೋದಿ ಎಲ್ಲ ಹಣವನ್ನು ಅದಾನಿಗೆ ನೀಡಿದ್ದಾರೆ. ಅದಾನಿ 75 ಸಾವಿರ ಕೋಟಿ ರೂಪಾಯಿ ಮೋದಿಯಿಂದ ಪಡೆದು ಗುಳುಂ ಮಾಡಿದ್ದಾನೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.
ಮೂಲ್ಕಿ - ಮೂಡಬಿದರೆ ವಿಧಾನಸಭಾ ಕ್ಷೇತ್ರದ ಮುಲ್ಕಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಹರಿಪ್ರಸಾದ್ ಹರಿತ ಮಾತುಗಳಿಂದ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಬಡವರ ಪರ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿಲ್ಲ. ತಮ್ಮ ಸ್ನೇಹಿತರನ್ನು ದೊಡ್ಡ ಉದ್ಯಮಿಗಳಾಗಿಸಲು ಮಾತ್ರ ಯೋಜನೆ ಹಮ್ಮಿಕೊಳ್ಳುತ್ತಿದ್ದಾರೆ. ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಜನಸಾಮಾನ್ಯರಿಗೆ ಮನೆ ನಡೆಸುವುದಕ್ಕೂ ಸಂಕಷ್ಟ ಎದುರಾಗುತ್ತಿದೆ. ಆದರೆ ಕಾಂಗ್ರೆಸ್ ಯಾವತ್ತೂ ಬಡವರ ಪರ ಇದೆ ಎನ್ನುವುದನ್ನು ನಿರೂಪಿಸುತ್ತಿದ್ದೇವೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಮನೆ ನಡೆಸುವ ಪ್ರತಿ ಮಹಿಳೆಗೂ ತಿಂಗಳಲ್ಲಿ 2000 ರೂ. ಕೊಡಲಾಗುವುದು. ಈ ಯೋಜನೆಯಲ್ಲಿ ಬಡವರು, ಶ್ರೀಮಂತ, ನಿರ್ಗತಿಕ ಅಂತ ವ್ಯತ್ಯಾಸ ಇಲ್ಲ. ಮನೆ ನಡೆಸುವ ಪ್ರತಿ ಯಜಮಾನಿಗೂ ತಿಂಗಳಿಗೆ 2 ಸಾವಿರ ರೂ. ಕೊಡಲಾಗುವುದು. ವರ್ಷಕ್ಕೆ 24 ಸಾವಿರ ರೂಪಾಯಿ ನೀಡಲಾಗುವುದು ಎಂದು ಹೇಳಿದರು.
ಕರಾವಳಿಯಲ್ಲಿ ಶಾಂತಿ ಕದಡುವ ಹೇಳಿಕೆಗಳನ್ನು ನೀಡಿ ದಾರಿ ತಪ್ಪಿಸಲಾಗುತ್ತಿದೆ. ಇಲ್ಲಿನ ದೇವಾಲಯಗಳ ಉತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬ್ಯಾನರ್ ಹಾಕಲಾಗುತ್ತಿದೆ. ಮುಲ್ಕಿಯ ದುರ್ಗಾಪರಮೇಶ್ವರಿ ದೇವಾಲಯವನ್ನು 12ನೇ ಶತಮಾನದಲ್ಲಿ ಬಪ್ಪಬ್ಯಾರಿ ಕಟ್ಟಿಸಿದ ಇತಿಹಾಸ ಇದೆ. ಬಪ್ಪ ಬ್ಯಾರಿ ಯಾರು? ಮುಸ್ಲಿಂ ವ್ಯಕ್ತಿ ಕಟ್ಟಿಸಿದ ದೇವಾಲಯಕ್ಕೆ ಹಿಂದುಗಳು ಹೋಗಬಾರದು ಎಂದು ಹೇಳುವ ಧೈರ್ಯವಿದೆಯೆ? ಇತಿಹಾಸವನ್ನು ತಿರುಚಿ ಜನರ ಭಾವನೆ ಕೆರಳಿಸುವ ಕೆಲಸ ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ. ಮಕ್ಕಳ ಮನಸ್ಸನ್ನು ಕೆರಳಿಸಲಾಗುತ್ತಿದೆ. ಮಕ್ಕಳ ಕೈಯಲ್ಲಿ ಚಾಕು ಚೂರಿ ನೀಡಿ ಭಯೋತ್ಪಾದಕರನ್ನು ಮಾಡಲು ಹೊರಟಿದ್ದಾರೆ ಎಂದು ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
Adani has eaten 75 thousand crores of Modi slams BK Hariprasad in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm