ಬ್ರೇಕಿಂಗ್ ನ್ಯೂಸ್
06-02-23 10:52 pm Mangalore Correspondent ಕರಾವಳಿ
ಮಂಗಳೂರು, ಫೆ.6: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆ ಮಾಡುವ ಹೆಸರಲ್ಲಿ ಅಧ್ಯಯನ ಸಮಿತಿ ಮಾಡಿದ್ದೇ ತುಳುವರಿಗೆ ಮಾಡಿದ ಅವಮಾನ ಎಂದು ವಿಧಾನಸಭೆ ವಿಪಕ್ಷ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ತುಳು ಭಾಷೆಗೆ ಅದರದ್ದೇ ಆದ ಇತಿಹಾಸವಿದೆ. ಈ ಭಾಷೆಯ ಬಗ್ಗೆ ಅಧ್ಯಯನ ಮಾಡಿ ವರದಿ ಕೊಡುವ ಅವಶ್ಯಕತೆ ಏನು? ಇದು ಜನರಿಗೆ ಮೋಸ ಮಾಡುವ ತಂತ್ರ. ಬಿಜೆಪಿ ಶಾಸಕರು ತುಳುನಾಡಿನ ಜನರಿಗೆ ಮೋಸ ಮಾಡಿದ್ದಾರೆ. ಕರಾವಳಿಯಲ್ಲಿ ಬಿಜೆಪಿ ಶಾಸಕರು ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾದರೂ ಎರಡನೇ ರಾಜ್ಯ ಭಾಷೆಯನ್ನಾಗಿ ಮಾಡಲಿಲ್ಲ. ಈಗ ಚುನಾವಣೆ ಹತ್ತಿರ ಬರೋವಾಗ ಜನರ ಆಕ್ರೋಶ ತಪ್ಪಿಸಲು ಮೋಸ ಮಾಡುತ್ತಿದ್ದಾರೆ. ಸರ್ಕಾರ ಅಧ್ಯಯನ ಸಮಿತಿ ಮಾಡಿರೋದೇ ತುಳು ಭಾಷೆಗೆ ಮಾಡಿರುವ ಅವಮಾನ ಎಂದು ಹೇಳಿದರು.

ಕೇಂದ್ರ ಬಜೆಟ್ ನಲ್ಲಿ ಕರಾವಳಿಗೆ ಒಂದೇ ಒಂದು ಯೋಜನೆಯಾಗಲೀ, ಅನುದಾನವನ್ನಾಗಲೀ ನೀಡಿಲ್ಲ. ಶಿರಾಡಿ ಘಾಟಿಗೆ ಸುರಂಗ ಮಾರ್ಗ ಅಂತ ಹಲವು ವರ್ಷಗಳಿಂದ ಹೇಳುತ್ತಿದ್ದಾರೆ. ಆದರೆ ಯಾವುದೇ ಬಜೆಟ್ ನಲ್ಲಿ ಈ ಯೋಜನೆಗೆ ಹಣ ಇಟ್ಟಿಲ್ಲ. ರೈಲ್ವೇ ಪ್ರತ್ಯೇಕ ವಿಭಾಗ ಕೇಳಿದ್ದರೂ ಸರ್ಕಾರದ ಸ್ಪಂದನೆ ಇಲ್ಲ. ಬಂದರು, ರಸ್ತೆಗೆ ಯಾವ ಅನುದಾನವನ್ನೂ ಸರ್ಕಾರ ನೀಡಿಲ್ಲ. ಶಿರಾಡಿ ಘಾಟ್ ರಸ್ತೆಯ ಬಗ್ಗೆ ಸರ್ಕಾರ ಸ್ಪಷ್ಟವಾಗಿ ಜನರಿಗೆ ತಿಳಿಸಲಿ, ನಮಗೆ ಟನಲ್ ಬೇಡ, ರಸ್ತೆಗೆ ತೇಪೆ ಆದರೂ ಹಾಕಿ. ಅದೂ ಆಗಲ್ಲ ಅಂದ್ರೆ ನಾವು ನಮ್ಮ ಅನುದಾನ ಬಳಸಿ ತೇಪೆ ಕಾರ್ಯ ಮಾಡುತ್ತೇವೆ ಎಂದು ಯುಟಿ ಖಾದರ್ ತಿರುಗೇಟು ನೀಡಿದರು.

ಶಿರಾಡಿ ಘಾಟಿಯಿಂದ ಅಮಿತ್ ಷಾ ಕರೆತನ್ನಿ
ಫೆ.11 ರಂದು ಮಂಗಳೂರಿನಲ್ಲಿ ಅಮಿತ್ ಷಾ ರೋಡ್ ಷೋ ಹಮ್ಮಿಕೊಂಡಿರುವ ಬಗ್ಗೆ ಖಾದರ್ ವ್ಯಂಗ್ಯವಾಡಿದ್ದು ಅಮಿತ್ ಷಾ ಕರಾವಳಿಗೆ ಬರುವುದಕ್ಕೆ ಸ್ವಾಗತ ಮಾಡುತ್ತೇನೆ. ಆದರೆ ಅವರನ್ನು ಬೆಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ ಮಂಗಳೂರಿಗೆ ಕರೆ ತರಲಿ. ಘಾಟಿ ರಸ್ತೆಯಲ್ಲಿ ರೋಡ್ ಷೋ ಮಾಡಿ ರಸ್ತೆಯ ಹೊಂಡ -ಗುಂಡಿಗಳನ್ನು ಲೆಕ್ಕ ಮಾಡಲಿ. ಅಲ್ಲಿಂದ ಗೃಹ ಸಚಿವರನ್ನು ಕರೆತಂದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸೆಲ್ಯೂಟ್ ಹೊಡೆಯುತ್ತೇನೆ ಎಂದು ಸವಾಲು ಹಾಕಿದರು.
MLA U T Khader said, "The state government is betraying the people of Tulunadu by considering the people's proposal to make Tulu as second language of the state after Kannada during the time of elections."
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm