ಬ್ರೇಕಿಂಗ್ ನ್ಯೂಸ್
06-02-23 10:56 pm Mangalore Correspondent ಕರಾವಳಿ
ಮಂಗಳೂರು, ಫೆ.6: ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ವಾಸವಿದ್ದ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿದ್ದು ನೂರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರಿನ ಶಕ್ತಿನಗರದ ಸಿಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ಘಟನೆ ಸಂಭವಿಸಿದೆ. ವಿದ್ಯಾರ್ಥಿನಿಯರಿಗೆ ಫುಡ್ ಪಾಯ್ಸನ್ ಆಗಿ ವಾಂತಿ ಮತ್ತು ಉಸಿರಾಟದ ಸಮಸ್ಯೆಗೆ ಈಡಾಗಿದ್ದಾರೆ. ಪ್ಯಾರಾ ಮೆಡಿಕಲ್, ಫಿಸಿಯೋಥೆರಪಿ, ನರ್ಸಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿಯರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ.
ಅಸ್ವಸ್ಥ ವಿದ್ಯಾರ್ಥಿನಿಯರನ್ನು ಮಂಗಳೂರಿನ ಕೆಎಂಸಿ, ಮಂಗಳಾ ಮತ್ತು ಸಿಟಿ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಕಲುಷಿತ ನೀರಿನ ಸಮಸ್ಯೆಯಿಂದಾಗಿ ಫುಡ್ ಪಾಯ್ಸನ್ ಆಗಿರುವ ಶಂಕೆಯಿದೆ.
ವಿದ್ಯಾರ್ಥಿಗಳು ಹೇಳುವ ಪ್ರಕಾರ, ಕೆಲವು ದಿನಗಳಿಂದ ನೀರಿನ ಸಮಸ್ಯೆ ಆಗ್ತಿದೆ. ಹಲವು ಬಾರಿ ಒಂದಿಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಿದೆ. ನೀರಿನ ಸಮಸ್ಯೆ ಕಾರಣದಿಂದಲೇ ಘಟನೆ ಸಂಭವಿಸಿದೆ ಎಂದಿದ್ದಾರೆ. ಒಬ್ಬಳು ವಿದ್ಯಾರ್ಥಿನಿ, ನಾವು ನಿನ್ನೆ ಸಂಜೆ ಊಟ ಮಾಡಿದ್ದು. ಆನಂತರ ಹೊಟ್ಟೆ ಸಮಸ್ಯೆ ಉಂಟಾಗಿತ್ತು. ಇವತ್ತು ಮಧ್ಯಾಹ್ನ ಹಲವರಿಗೆ ಸಮಸ್ಯೆ ಎದುರಾಗಿತ್ತು ಎಂದಿದ್ದಾಳೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದು 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಾಹಿತಿ ನೀಡಿದ್ದಾರೆ. ಎಜೆ, ಯುನಿಟಿ, ಮಂಗಳಾ, ಕೆಎಂಸಿ, ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿಗಳು ಬೆಳಗ್ಗಿನಿಂದಲೇ ಹೊಟ್ಟೆ ನೋವು, ವಾಂತಿ, ಭೇದಿಗೆ ಒಳಗಾಗಿದ್ದರು. ಪೋಷಕರು, ವಿದ್ಯಾರ್ಥಿಗಳು ಹಾಸ್ಟೆಲ್ ಹೊರಗಡೆ ಪ್ರತಿಭಟನೆ ನಡೆಸಿದ್ದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಕಲುಷಿತ ನೀರಿನ ಬಗ್ಗೆ ಆರೋಪ ಮಾಡಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ತನಿಖೆ ನಡೆಸಲಾಗುವುದು ಎಂದಿದ್ದಾರೆ.
Mangalore Food poisoning, more than 100 plus Students of City Hospital nursing students admitted. The exact reason for this is yet to be known. Police commissioner Shashi Kumar rushed to the spot. After the students complained of food poisoning, stomach ache, loose motions and vomiting, they were shifted in the college buses and admitted to various hospitals in city.It is reported that the condition of some of the students is serious.
27-06-25 05:38 pm
Bangalore Correspondent
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 04:56 pm
Mangalore Correspondent
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
27-06-25 07:27 pm
HK News Desk
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am