ಬ್ರೇಕಿಂಗ್ ನ್ಯೂಸ್
09-02-23 08:23 pm Mangalore Correspondent ಕರಾವಳಿ
ಪುತ್ತೂರು, ಫೆ.9 : ಪುತ್ತೂರು ಶಾಸಕ ಸಂಜೀವ ಮಠಂದೂರು ಅಣಬೆ ಹೇಳಿಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಗೃಹ ಸಚಿವ ಅಮಿತ್ ಷಾ ಕಾರ್ಯಕ್ರಮದ ಬಗ್ಗೆ ಆಮಂತ್ರಣ ಪತ್ರಿಕೆ ಹಂಚಲು ಪುತ್ತೂರಿನಲ್ಲಿ ಕಾಲ್ನಡಿಗೆ ಜಾಥಾ ನಡೆಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರೇ ಎರಡು ಗುಂಪುಗಳಾಗಿ ಮಾತಿನ ಚಕಮಕಿ ನಡೆಸಿದ್ದು ಕೈ ಕೈ ಮಿಲಾಯಿಸಲು ಮುಂದಾಗಿದ್ದಾರೆ.
ಅಮಿತ್ ಷಾಗೆ ಸ್ವಾಗತ ಕೋರಿ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಬ್ಯಾನರ್ ಅಳವಡಿಸಿದ್ದರು. ಚುನಾವಣೆ ಸಂದರ್ಭದಲ್ಲಿ ಪ್ರತ್ಯೇಕ ಬ್ಯಾನರ್ ಹಾಕಿದ್ದ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದ ಶಾಸಕ ಸಂಜೀವ ಮಠಂದೂರು, ಮಳೆ ಬಂದಾಗ ಅಲ್ಲಲ್ಲಿ ಅಣಬೆಗಳು ಹುಟ್ಟಿಕೊಳ್ಳುವ ರೀತಿ ಕೆಲವರು ಚುನಾವಣೆ ಬಂದಾಗ ಈ ರೀತಿ ಕಾಣಿಸಿಕೊಳ್ಳುತ್ತಾರೆ ಎಂದು ಪರೋಕ್ಷವಾಗಿ ಅರುಣ್ ಪುತ್ತಿಲರಿಗೆ ಟಾಂಗ್ ನೀಡಿದ್ದರು.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅರುಣ್ ಪುತ್ತಿಲರ ಬೆಂಬಲಿಗರು ಶಾಸಕರಲ್ಲಿ ಈ ವಿಚಾರವನ್ನು ಪ್ರಶ್ನಿಸಿದ್ದು, ಶಾಸಕರ ಪರ ಗುಂಪು ಮತ್ತು ಅರುಣ್ ಪುತ್ತಿಲ ಪರ ಗುಂಪುಗಳ ನಡುವೆ ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ಈ ವೇಳೆ, ಶಾಸಕ ಮಠಂದೂರು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ. ಇತರೇ ಮುಖಂಡರು, ಸಿಟ್ಟುಗೊಂಡಿದ್ದ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದಾರೆ. ಈ ವೇಳೆ, ಎರಡೂ ಗುಂಪುಗಳ ಕಾರ್ಯಕರ್ತರು ತಳ್ಳಾಡಿ ಹೊಯ್ ಕೈ ನಡೆಸಿದ್ದಾರೆ.
ಮಠಂದೂರು ಜೆಡಿಎಸ್ ನಿಂದ ಬಂದಿರುವ ವ್ಯಕ್ತಿಯಾಗಿದ್ದು ಮೂಲ ಬಿಜೆಪಿ ಅಲ್ಲ. ಇವರು ನಮಗೆ ಪಾಠ ಹೇಳಲು ಬಂದಿದ್ದಾರೆ. ಪ್ರೆಸ್ ನಲ್ಲಿ ಅಣಬೆಗಳು ಅಂತ ಹೇಳಿದ್ದಾರಲ್ಲಾ.. ಇದು ಕಾರ್ಯಕರ್ತರಿಗೆ ಕೊಡುವ ಮರ್ಯಾದೆಯಾ.. ಅರುಣ್ ಪುತ್ತಿಲ ಕಳೆದ ಬಾರಿ ಇವರ ಪರ ಪ್ರಚಾರಕ್ಕೆ ಬಂದಿಲ್ಲವೇ.. ಇವರು ಯಾವ ಮುಖ ಇಟ್ಟುಕೊಂಡು ಅಣಬೆ ಅಂತಿದ್ದಾರೆ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಉದ್ರಿಕ್ತರಾಗಿದ್ದ ಕಾರ್ಯಕರ್ತರನ್ನು ಮುಖಂಡರು ಸಮಾಧಾನ ಹೇಳಿ, ಕಳುಹಿಸಿ ಕೊಟ್ಟಿದ್ದಾರೆ.
#Puttur #SanjeevaMatandoor and #ArunKumarPuttila fight internally over banners, cut outs on #AmitShah visit. Matandoor said, “In democracy all have got opportunity. As mushroom grows when it rains, new people appear suddenly during election time. pic.twitter.com/9jgYaBpqEM
— Headline Karnataka (@hknewsonline) February 9, 2023
Puttur Sanjeeva Matandoor and Arun Kumar Puttila fight internally over banners, cut outs on Amit Shah visit. Answering the queries of journalists about his photo not appearing on the cut-outs, Matandoor said, “In democracy all have got opportunity. As mushroom grows when it rains, new people appear suddenly during election time. But it does not last for long time.”
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 06:36 pm
Mangalore Correspondent
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm