ಬ್ರೇಕಿಂಗ್ ನ್ಯೂಸ್
09-02-23 08:23 pm Mangalore Correspondent ಕರಾವಳಿ
ಪುತ್ತೂರು, ಫೆ.9 : ಪುತ್ತೂರು ಶಾಸಕ ಸಂಜೀವ ಮಠಂದೂರು ಅಣಬೆ ಹೇಳಿಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಗೃಹ ಸಚಿವ ಅಮಿತ್ ಷಾ ಕಾರ್ಯಕ್ರಮದ ಬಗ್ಗೆ ಆಮಂತ್ರಣ ಪತ್ರಿಕೆ ಹಂಚಲು ಪುತ್ತೂರಿನಲ್ಲಿ ಕಾಲ್ನಡಿಗೆ ಜಾಥಾ ನಡೆಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರೇ ಎರಡು ಗುಂಪುಗಳಾಗಿ ಮಾತಿನ ಚಕಮಕಿ ನಡೆಸಿದ್ದು ಕೈ ಕೈ ಮಿಲಾಯಿಸಲು ಮುಂದಾಗಿದ್ದಾರೆ.
ಅಮಿತ್ ಷಾಗೆ ಸ್ವಾಗತ ಕೋರಿ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಬ್ಯಾನರ್ ಅಳವಡಿಸಿದ್ದರು. ಚುನಾವಣೆ ಸಂದರ್ಭದಲ್ಲಿ ಪ್ರತ್ಯೇಕ ಬ್ಯಾನರ್ ಹಾಕಿದ್ದ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದ ಶಾಸಕ ಸಂಜೀವ ಮಠಂದೂರು, ಮಳೆ ಬಂದಾಗ ಅಲ್ಲಲ್ಲಿ ಅಣಬೆಗಳು ಹುಟ್ಟಿಕೊಳ್ಳುವ ರೀತಿ ಕೆಲವರು ಚುನಾವಣೆ ಬಂದಾಗ ಈ ರೀತಿ ಕಾಣಿಸಿಕೊಳ್ಳುತ್ತಾರೆ ಎಂದು ಪರೋಕ್ಷವಾಗಿ ಅರುಣ್ ಪುತ್ತಿಲರಿಗೆ ಟಾಂಗ್ ನೀಡಿದ್ದರು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅರುಣ್ ಪುತ್ತಿಲರ ಬೆಂಬಲಿಗರು ಶಾಸಕರಲ್ಲಿ ಈ ವಿಚಾರವನ್ನು ಪ್ರಶ್ನಿಸಿದ್ದು, ಶಾಸಕರ ಪರ ಗುಂಪು ಮತ್ತು ಅರುಣ್ ಪುತ್ತಿಲ ಪರ ಗುಂಪುಗಳ ನಡುವೆ ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ಈ ವೇಳೆ, ಶಾಸಕ ಮಠಂದೂರು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ. ಇತರೇ ಮುಖಂಡರು, ಸಿಟ್ಟುಗೊಂಡಿದ್ದ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದಾರೆ. ಈ ವೇಳೆ, ಎರಡೂ ಗುಂಪುಗಳ ಕಾರ್ಯಕರ್ತರು ತಳ್ಳಾಡಿ ಹೊಯ್ ಕೈ ನಡೆಸಿದ್ದಾರೆ.
ಮಠಂದೂರು ಜೆಡಿಎಸ್ ನಿಂದ ಬಂದಿರುವ ವ್ಯಕ್ತಿಯಾಗಿದ್ದು ಮೂಲ ಬಿಜೆಪಿ ಅಲ್ಲ. ಇವರು ನಮಗೆ ಪಾಠ ಹೇಳಲು ಬಂದಿದ್ದಾರೆ. ಪ್ರೆಸ್ ನಲ್ಲಿ ಅಣಬೆಗಳು ಅಂತ ಹೇಳಿದ್ದಾರಲ್ಲಾ.. ಇದು ಕಾರ್ಯಕರ್ತರಿಗೆ ಕೊಡುವ ಮರ್ಯಾದೆಯಾ.. ಅರುಣ್ ಪುತ್ತಿಲ ಕಳೆದ ಬಾರಿ ಇವರ ಪರ ಪ್ರಚಾರಕ್ಕೆ ಬಂದಿಲ್ಲವೇ.. ಇವರು ಯಾವ ಮುಖ ಇಟ್ಟುಕೊಂಡು ಅಣಬೆ ಅಂತಿದ್ದಾರೆ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಉದ್ರಿಕ್ತರಾಗಿದ್ದ ಕಾರ್ಯಕರ್ತರನ್ನು ಮುಖಂಡರು ಸಮಾಧಾನ ಹೇಳಿ, ಕಳುಹಿಸಿ ಕೊಟ್ಟಿದ್ದಾರೆ.
#Puttur #SanjeevaMatandoor and #ArunKumarPuttila fight internally over banners, cut outs on #AmitShah visit. Matandoor said, “In democracy all have got opportunity. As mushroom grows when it rains, new people appear suddenly during election time. pic.twitter.com/9jgYaBpqEM
— Headline Karnataka (@hknewsonline) February 9, 2023
Puttur Sanjeeva Matandoor and Arun Kumar Puttila fight internally over banners, cut outs on Amit Shah visit. Answering the queries of journalists about his photo not appearing on the cut-outs, Matandoor said, “In democracy all have got opportunity. As mushroom grows when it rains, new people appear suddenly during election time. But it does not last for long time.”
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm