ಬ್ರೇಕಿಂಗ್ ನ್ಯೂಸ್
10-02-23 08:18 pm Mangalore Correspondent ಕರಾವಳಿ
ಉಳ್ಳಾಲ, ಫೆ.10 : ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಹೊಟೇಲ್ ಉದ್ಯೋಗಿ ಹಾಗೂ ಝೊಮ್ಯಾಟೋ ಡೆಲಿವರಿ ಬಾಯ್ ಓರ್ವರು ಸಾವನ್ನಪ್ಪಿದ ಘಟನೆ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಸಂಭವಿಸಿದೆ.
ಮೂಲತಃ ಕ್ಯಾಲಿಕಟ್ ನಿವಾಸಿ, ಕುತ್ತಾರು ಸಂತೋಷ ನಗರದ ಬಾಡಿಗೆ ಮನೆ ನಿವಾಸಿ ಅನಿಲ್ ಕುಮಾರ್ (41) ಮೃತರು. ಅನಿಲ್ ಝೊಮ್ಯಾಟೋ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಹಾಗೂ ಸಂಜೆ ಹೊತ್ತಲ್ಲಿ ದೇರಳಕಟ್ಟೆಯ ಜ್ಯೂಸ್ ಮ್ಯಾಜಿಕ್ ಹೊಟೇಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮಂಜನಾಡಿಯ ಕಲ್ಕಟ್ಟ ಮಾರ್ಗವಾಗಿ ಫುಡ್ ಡೆಲಿವರಿ ಆರ್ಡರ್ ಹಿಡಿದುಕೊಂಡು ತೆರಳುವ ಸಂದರ್ಭ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಕೇರಳ ನೋಂದಣಿಯ ಕಾರನ್ನ ಅಬೂಬಕರ್ ಸಿದ್ದೀಕ್ ಎಂಬವರು ಚಲಾಯಿಸುತ್ತಿದ್ದರೆನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಅನಿಲ್ ಸ್ಥಳೀಯ ಮನೆಯ ಕಂಪೌಂಡಿಗೆ ಎಸೆಯಲ್ಪಟ್ಟು ಬಳಿಕ ರಸ್ತೆಗೆ ಉರುಳಿ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅಪಘಾತ ನಡೆದ ಕಾರಿನಲ್ಲೇ ಗಾಯಾಳುವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಡರಾತ್ರಿ 1.45ರ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೆ ಅನಿಲ್ ಸಾವನ್ನಪ್ಪಿದ್ದಾರೆ.
ಸಹೋದ್ಯೋಗಿಯ ಸಾವಿಗೆ ಕಂಬನಿ ಮಿಡಿದ ಸಹೋದ್ಯೋಗಿಗಳು ಹಾಗೂ ಮಾಲೀಕರು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆ ಎದುರುಗಡೆ ಇರುವ ಜ್ಯೂಸ್ ಮ್ಯಾಜಿಕ್, ಐಸ್ ಮ್ಯಾಜಿಕ್ ಮತ್ತು ಬರ್ಗರ್ ಪಾಯಿಂಟ್ ಹೆಸರಿನ ಮೂರು ಹೊಟೇಲ್ ಗಳನ್ನು ಇಂದು ಇಡೀ ದಿನ ಬಂದ್ ನಡೆಸಿ ಗೌರವ ಸಲ್ಲಿಸಿದ್ದಾರೆ. ಮೃತ ಅನಿಲ್ ಕುಮಾರ್ ತಾಯಿ ಕೆಲ ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು. ಒಂಟಿಯಾಗಿದ್ದ ಅನಿಲ್ ಅವರಿಗೆ ವಿವಾಹವಾಗಲು ಹೊಟೇಲ್ ಮಾಲೀಕ ಸಾಜಿದ್ ಅವರು ಹುಡುಗಿಯನ್ನು ಹುಡುಕಿದ್ದರು. ಇದೇ ಖುಷಿಯಲ್ಲಿ ಫೆ.8 ರಂದು ಕ್ಯಾಲಿಕಟ್ ನ ದೇವಸ್ಥಾನಗಳಿಗೆ ತೆರಳಿದ್ದ ಅನಿಲ್ ಕುಮಾರ್ ನಿನ್ನೆ ಸಂಜೆಯಷ್ಟೇ ಹೊಟೇಲಿಗೆ ವಾಪಸ್ಸಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Zomato delivery boy dies in a road accident after a car rams over him at Manajanady in Ullal. The deceased has been identified as Anil Kumar (41).
18-05-24 08:20 pm
Bangalore Correspondent
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
Devaraje Gowda, Dk Shivakumar, Kumaraswamy: ಪ...
17-05-24 10:47 pm
18-05-24 09:15 pm
HK News Desk
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
Cannes 2024, Aishwarya Rai Bachchan: ಕೇನ್ಸ್ ಚ...
17-05-24 02:44 pm
18-05-24 05:13 pm
Mangalore Correspondent
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
Mangalore Airport, Missing: ಕದ್ರಿಯಿಂದ ಆಟೋದಲ್ಲ...
16-05-24 09:59 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm