ಬೈಕ್ ಸ್ಕಿಡ್ ಆಗಿ ಬಿದ್ದ ಸವಾರನ ಮೇಲೆ ಹರಿದ ಅಪರಿಚಿತ ವಾಹನ ; ಅಡ್ಯಾರ್ ನಲ್ಲಿ ಭೀಕರ ದುರಂತ 

11-02-23 02:51 pm       Mangalore Correspondent   ಕರಾವಳಿ

ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. 

ಮಂಗಳೂರು, ಫೆ.11 : ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. 

ಮೃತ ಬೈಕ್ ಸವಾರನನ್ನು ವಿಟ್ಲ ಸಮೀಪದ ಮಾಣಿಲ ಗ್ರಾಮದ ಪಕಳಕುಂಜ ಬಾಳೆಕಾನ ನಿವಾಸಿ ಕಾರ್ತಿಕ್ ಮಣಿಯಾನಿ (24) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಡೆಕೊರೇಷನ್ ಕೆಲಸ ಮಾಡುತ್ತಿದ್ದ ಕಾರ್ತಿಕ್ ಶುಕ್ರವಾರ ರಾತ್ರಿ ಹತ್ತು ಗಂಟೆ ಸುಮಾರಿಗೆ ತನ್ನ ಮನೆಗೆ ತೆರಳುತ್ತಿದ್ದಾಗ ಅಡ್ಯಾರ್ ಕಟ್ಟೆಯ ಬಳಿ ಬೈಕ್ ಸ್ಕಿಡ್ ಆಗಿ ಅಪಘಾತಕ್ಕೀಡಾಗಿದ್ದಾರೆ. ಬೈಕ್ ಸ್ಕಿಡ್ ಆಗಿ ಸವಾರ ಕಾರ್ತಿಕ್ ರೋಡ್ ಡಿವೈಡರ್‌ಗೆ ತಾಗಿ ರಸ್ತೆಗೆ ಬಿದ್ದಿದ್ದರು. ಅಷ್ಟರಲ್ಲಿ ಇನ್ನೊಂದು ರಸ್ತೆಯಲ್ಲಿ ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಯಾವುದೋ ಅಪರಿಚಿತ ವಾಹನವು ಇವರ ಮೇಲೆ ಹರಿದು ಹೋಗಿದೆ. ಇದರ ಪರಿಣಾಮ ಕಾರ್ತಿಕ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಮಂಗಳೂರು ಸಂಚಾರ ದಕ್ಷಿಣ ಠಾಣೆ ಪೊಲೀಸರು ತಿಳಿಸಿದ್ದಾರೆ.

A youth, resident of Manila in the taluk died in a motorcycle accident that occurred at Adyar on the outskirts of Mangaluru. Kartik Maniyani (24), son of Gopalakrishna Maniyani, resident of Pakalakunja Balekana of Manila, is the unfortunate victim, who lost his life. Kartik was working as a decorator in Mangaluru. He was returning to his house after finishing his work when he met with accident at Adyar.