ಬ್ರೇಕಿಂಗ್ ನ್ಯೂಸ್
11-02-23 10:33 pm Mangalore Correspondent ಕರಾವಳಿ
ಮಂಗಳೂರು, ಫೆ.11: ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಬಲ ಆಗಿರುವ ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳ ಪ್ರತಿನಿಧಿಗಳ ಸಭೆ ಮಂಗಳೂರಿನ ಏರ್ಪೋರ್ಟ್ ಬಳಿಯ ಶ್ರೀದೇವಿ ಕಾಲೇಜಿನಲ್ಲಿ ನಡೆದಿದೆ. ಸಭೆಯಲ್ಲಿ ಈಗಿನಿಂದಲೇ ಚುನಾವಣೆಗೆ ತಯಾರಾಗುವಂತೆ ಅಮಿತ್ ಷಾ ಸೂಚನೆ ನೀಡಿದ್ದಾರೆ.
ಸಭೆಯ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಮಾಧ್ಯಮದವರೊಂದಿಗೆ ಮಾತನಾಡಿ, ಚುನಾವಣೆ ಹತ್ತಿರ ಬಂದಿದ್ದು, ಮುಖಂಡರು ಸೇರಿ ಎಲ್ಲರೂ ಪ್ರಚಾರ ಕಾರ್ಯದಲ್ಲಿ ತೊಡಗಬೇಕು. ಒಂದು ತಿಂಗಳ ಕಾಲ ಕಾಲಾವಕಾಶವಿದ್ದು, ಹಳ್ಳಿ ಹಳ್ಳಿಗಳಿಗೆ, ಮನೆ ಮನೆಗೂ ಹೋಗಬೇಕು. ಆಬಳಿಕ ತಾನು ಮತ್ತೊಂದು ಬಾರಿ ನಿಮ್ಮೊಂದಿಗೆ ಮಾತನಾಡುತ್ತೇನೆ. ಎಲ್ಲರೂ ಪಕ್ಷ ಕಟ್ಟುವ ಕಾರ್ಯದಲ್ಲಿ ತೊಡಗಿಸಬೇಕು. ನಿಶ್ಚಿತವಾಗಿ ನಾವು ಅಧಿಕಾರಕ್ಕೆ ಬರುತ್ತೇವೆ. ಯಾವುದೇ ಸಂಶಯವಿಲ್ಲ ಎಂದು ಅಮಿತ್ ಶಾ ಸೂಚನೆ ನೀಡಿದ್ದಾರೆಂದು ಯಡಿಯೂರಪ್ಪ ಹೇಳಿದರು.


ಸಚಿವ ಸುನಿಲ್ ಕುಮಾರ್ ಮಾತನಾಡಿ, ಎರಡು ವಿಭಾಗದ ಆರು ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಮುಖರ ಸಭೆ ನಡೆದಿದೆ. 33 ವಿಧಾನಸಭಾ ಕ್ಷೇತ್ರಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗಿದೆ. 33 ಕ್ಷೇತ್ರಗಳನ್ನೂ ಗೆಲ್ಲುವ ಸೂತ್ರಗಳನ್ನ ನಮ್ಮ ಮುಂದೆ ಇಟ್ಟಿದ್ದಾರೆ. ಈ ಬಾರಿ ಪೂರ್ಣ ಬಹುಮತದ ಬಿಜೆಪಿ ಸರಕಾರ ರಚನೆ ಅಗಬೇಕು. ಈಗ 29 ರಲ್ಲಿ ಬಿಜೆಪಿ ಶಾಸಕರಿದ್ದರೆ 4 ಕಾಂಗ್ರೆಸ್ ಕೈಯಲ್ಲಿದೆ. ಉಳಿದ ನಾಲ್ಕು ಕ್ಷೇತ್ರಗಳನ್ನೂ ಗೆಲ್ಲುವ ಕುರಿತ ಚರ್ಚೆ ನಡೆದಿದೆ ಎಂದು ತಿಳಿಸಿದರು.
ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕಾರವಾರ, ಶಿವಮೊಗ್ಗ, ಕೊಡಗು ಸೇರಿದಂತೆ ಆರು ಜಿಲ್ಲೆಗಳ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಕೆ.ಎಸ್.ಈಶ್ವರಪ್ಪ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಸೇರಿದಂತೆ ಆರು ಜಿಲ್ಲೆಗಳ ಶಾಸಕರು, ಬಿಜೆಪಿಯ ಮುಖಂಡರು ಭಾಗಿಯಾಗಿದ್ದರು. ಸಭೆಗೂ ಮುನ್ನ ಕೆಂಜಾರಿನಲ್ಲಿ ತೆರೆದ ವಾಹನದಲ್ಲಿ ಅಮಿತ್ ಷಾ, ಯಡಿಯೂರಪ್ಪ, ಸಿಎಂ ಬೊಮ್ಮಾಯಿ ರೋಡ್ ಶೋ ನಡೆಸಿದರು.
6 districts, 33 constituencies of Karnataka state is the target for BJPs Victory, Amit Shah hidden meeting in Mangalore. Speaking to Media former CM Yediyurappa stated that every leader must be involved in active campaigning of parties in every corner of the state.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm