ಬ್ರೇಕಿಂಗ್ ನ್ಯೂಸ್
12-02-23 01:27 pm Mangalore Correspondent ಕರಾವಳಿ
ಸುಳ್ಯ , ಫೆ.12: ಈಜಲು ಪಯಸ್ವಿನಿ ನದಿಗೆ ಇಳಿದಿದ್ದ ಪುತ್ತೂರಿನ ಕೌಡಿಚ್ಚಾರಿನ ಯುವಕರಿಬ್ಬರು ನೀರು ಪಾಲಾದ ಘಟನೆ ಸುಳ್ಯದ ದೊಡ್ಡೇರಿ ಸಮೀಪ ನಡೆದಿದೆ.
ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್ (19) ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆಯ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ (19) ಮೃತ ಯುವಕರು.
ಪುತ್ತೂರಿನ ಕೌಡಿಚ್ಚಾರ್ ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಸುಳ್ಯದ ಪಯಸ್ವಿನಿ ನದಿಗೆ ಈಜಲು ಬಂದಿದ್ದರು. ಯುವಕರಲ್ಲಿ ಒಬ್ಬ ನೀರಿಗಿಳಿದಿದ್ದು, ನೀರಿಗಿಳಿದ ಸ್ಥಳ ಪ್ರಪಾತವಾಗಿದ್ದರಿಂದ ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ ಸ್ನೇಹಿತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.
ಸಂತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೂಡ್ಲು, ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿ ಕಾನ, ಜಿತೇಶ್ ಮತ್ತು ಪ್ರವೀಣ್ ಎಂಬವರು ಜತೆಯಾಗಿ ಸುಳ್ಯಕ್ಕೆ ಬಂದಿದ್ದರು. ಸುಳ್ಯದ ಓಡಬಾಯಿ ಬಳಿಯ ತೂಗುಸೇತುವೆ ಸಮೀಪ ಕಾರನ್ನು ನಿಲ್ಲಿಸಿ ಸೇತುವೆಯಲ್ಲಿ ನಡೆದು ದೊಡ್ಡೇರಿಯ ಸಂಬಂಧಿಕರ ಮನೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಇಳಿದಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Two youths, who got down into Payaswini river to swim, drowned near Dodderi on Saturday. The deceased are identified as Jeetesh (19), son of Derla Narayana Patali, resident of Ariadka in Puttur and Praveen (19), son of Krishna Naika, resident of Ambatemoole of Paduvannoor village.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm