ಬ್ರೇಕಿಂಗ್ ನ್ಯೂಸ್
12-02-23 01:27 pm Mangalore Correspondent ಕರಾವಳಿ
ಸುಳ್ಯ , ಫೆ.12: ಈಜಲು ಪಯಸ್ವಿನಿ ನದಿಗೆ ಇಳಿದಿದ್ದ ಪುತ್ತೂರಿನ ಕೌಡಿಚ್ಚಾರಿನ ಯುವಕರಿಬ್ಬರು ನೀರು ಪಾಲಾದ ಘಟನೆ ಸುಳ್ಯದ ದೊಡ್ಡೇರಿ ಸಮೀಪ ನಡೆದಿದೆ.
ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್ (19) ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆಯ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ (19) ಮೃತ ಯುವಕರು.
ಪುತ್ತೂರಿನ ಕೌಡಿಚ್ಚಾರ್ ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಸುಳ್ಯದ ಪಯಸ್ವಿನಿ ನದಿಗೆ ಈಜಲು ಬಂದಿದ್ದರು. ಯುವಕರಲ್ಲಿ ಒಬ್ಬ ನೀರಿಗಿಳಿದಿದ್ದು, ನೀರಿಗಿಳಿದ ಸ್ಥಳ ಪ್ರಪಾತವಾಗಿದ್ದರಿಂದ ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ ಸ್ನೇಹಿತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.
ಸಂತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೂಡ್ಲು, ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿ ಕಾನ, ಜಿತೇಶ್ ಮತ್ತು ಪ್ರವೀಣ್ ಎಂಬವರು ಜತೆಯಾಗಿ ಸುಳ್ಯಕ್ಕೆ ಬಂದಿದ್ದರು. ಸುಳ್ಯದ ಓಡಬಾಯಿ ಬಳಿಯ ತೂಗುಸೇತುವೆ ಸಮೀಪ ಕಾರನ್ನು ನಿಲ್ಲಿಸಿ ಸೇತುವೆಯಲ್ಲಿ ನಡೆದು ದೊಡ್ಡೇರಿಯ ಸಂಬಂಧಿಕರ ಮನೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಇಳಿದಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Two youths, who got down into Payaswini river to swim, drowned near Dodderi on Saturday. The deceased are identified as Jeetesh (19), son of Derla Narayana Patali, resident of Ariadka in Puttur and Praveen (19), son of Krishna Naika, resident of Ambatemoole of Paduvannoor village.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm