ಬ್ರೇಕಿಂಗ್ ನ್ಯೂಸ್
12-02-23 08:11 pm Udupi Correspondent ಕರಾವಳಿ
ಕುಂದಾಪುರ, ಫೆ.12 : ಶಿರೂರು ಟೋಲ್ಗೇಟ್ ಬಳಿಯ ನಿವಾಸಿ, ಕಂಬಳ ಒಟಗಾರ ಸುರೇಶ್ ಪೂಜಾರಿ (37) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋರ್ಟ್ ಪ್ರೋಸೆಸ್ ಹುದ್ದೆಯಲ್ಲಿದ್ದ ಅವರು ಒಂದು ವರ್ಷದ ಹಿಂದೆ ಅಮಾನುತುಗೊಂಡಿದ್ದು ಅದೇ ಚಿಂತೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಶಿರೂರಿನ ಪತ್ನಿ ಮನೆಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದರು. ಸಂಜೆ ಮನೆಯಿಂದ ಹೊರಬಂದ ಅವರು, ಪತ್ನಿ ಮೊಬೈಲ್ಗೆ ಮೆಸೇಜ್ ಮಾಡಿದ್ದರು. 'ಸಾರಿ ಸಾರಿ ಸಾರಿ, ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಮನೆಯವರು ನಿನಗೆ ರಗಳೆ ಮಾಡಬಹುದು. ಅವರಿಗೆಲ್ಲ ಮೇಸೆಜ್ ತೋರಿಸು. ನನಗೆ ಕೆಲಸ ಆಗಲಿಲ್ಲ. ಅದೇ ತಲೆಬಿಸಿಯಲ್ಲಿ ತಪ್ಪು ಮಾಡುತ್ತಿದ್ದೇನೆ. ನನ್ನಿಂದ ಹೇಡಿಯಂತೆ ಬದುಕಲು ಆಗುವುದಿಲ್ಲ. ನಾನು ಸಾಯುತ್ತಿದ್ದೇನೆ. ಗೇರು ಮರಕ್ಕೆ ನೇಣು ಹಾಕಿಕೊಳ್ಳುತ್ತಿದ್ದೇನೆ ಬೇರೆ ಎಲ್ಲೂ ಹುಡುಕುವುದು ಬೇಡ' ಎಂದು ಮೇಸೆಜ್ ಕಳುಹಿಸಿದ್ದರು.
ತಕ್ಷಣ ಸಂಬಂಧಿಕರು ಹುಡುಕಾಟ ಆರಂಭಿಸಿದ್ದು ಟೋಲ್ಗೇಟ್ ಹಿಂಬದಿಯ ಸರಕಾರಿ ಹಾಡಿಯಲ್ಲಿ ಸುರೇಶ್ ಮೃತದೇಹವು ಗೇರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುರೇಶ ಪೂಜಾರಿ ವಿರುದ್ದ ಕಳೆದ ವರ್ಷ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಿಂದ ಸುರೇಶ್ ನಿರ್ವಹಿಸುತ್ತಿದ್ದ ಕೋರ್ಟ್ ಪ್ರೋಸೆಸ್ ಕೆಲಸದಿಂದ ಅಮಾನತಾಗಿದ್ದು ಈವರೆಗೆ ರಿವೋಕ್ ಆಗಿರಲಿಲ್ಲ. ಈ ಬಗ್ಗೆ ನಿತ್ಯ ಪೊಲೀಸ್ ಠಾಣೆಗೆ ಅಲೆದಾಡುತ್ತಿದ್ದರು. ಕೆಲಸವಿಲ್ಲದ ಚಿಂತೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರೇಶ್ ಕಂಬಳದ ಪ್ರೋತ್ಸಾಹಕ, ಸಂಘಟಕನಾಗಿದ್ದು, ಕಂಬಳದ ಹಗ್ಗದ ವಿಭಾಗದ ಓಟಗಾರರಾಗಿದ್ದರು. ಅಲ್ಲದೆ ಇತ್ತೀಚೆಗೆ ಕಂಬಳದಲ್ಲಿ ಓಟದ ಮಾಪನ ಮಾಡುವ ಸುಧಾರಿತ ಸೆನ್ಸಾರ್ ಯಂತ್ರವನ್ನು ನಿರ್ವಹಿಸುತ್ತಿದ್ದರು. ಕ್ರಿಯಾಶೀಲ ವ್ಯಕ್ತಿಯಾಗಿದ್ದ ಸುರೇಶ್ ಸ್ನೇಹಜೀವಿಯಾಗಿ ಗುರುತಿಸಿಕೊಂಡಿದ್ದರು.
Kundapur Kambala racer commits suicide after losing job.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm