ಬ್ರೇಕಿಂಗ್ ನ್ಯೂಸ್
12-02-23 08:11 pm Udupi Correspondent ಕರಾವಳಿ
ಕುಂದಾಪುರ, ಫೆ.12 : ಶಿರೂರು ಟೋಲ್ಗೇಟ್ ಬಳಿಯ ನಿವಾಸಿ, ಕಂಬಳ ಒಟಗಾರ ಸುರೇಶ್ ಪೂಜಾರಿ (37) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋರ್ಟ್ ಪ್ರೋಸೆಸ್ ಹುದ್ದೆಯಲ್ಲಿದ್ದ ಅವರು ಒಂದು ವರ್ಷದ ಹಿಂದೆ ಅಮಾನುತುಗೊಂಡಿದ್ದು ಅದೇ ಚಿಂತೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಶಿರೂರಿನ ಪತ್ನಿ ಮನೆಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದರು. ಸಂಜೆ ಮನೆಯಿಂದ ಹೊರಬಂದ ಅವರು, ಪತ್ನಿ ಮೊಬೈಲ್ಗೆ ಮೆಸೇಜ್ ಮಾಡಿದ್ದರು. 'ಸಾರಿ ಸಾರಿ ಸಾರಿ, ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಮನೆಯವರು ನಿನಗೆ ರಗಳೆ ಮಾಡಬಹುದು. ಅವರಿಗೆಲ್ಲ ಮೇಸೆಜ್ ತೋರಿಸು. ನನಗೆ ಕೆಲಸ ಆಗಲಿಲ್ಲ. ಅದೇ ತಲೆಬಿಸಿಯಲ್ಲಿ ತಪ್ಪು ಮಾಡುತ್ತಿದ್ದೇನೆ. ನನ್ನಿಂದ ಹೇಡಿಯಂತೆ ಬದುಕಲು ಆಗುವುದಿಲ್ಲ. ನಾನು ಸಾಯುತ್ತಿದ್ದೇನೆ. ಗೇರು ಮರಕ್ಕೆ ನೇಣು ಹಾಕಿಕೊಳ್ಳುತ್ತಿದ್ದೇನೆ ಬೇರೆ ಎಲ್ಲೂ ಹುಡುಕುವುದು ಬೇಡ' ಎಂದು ಮೇಸೆಜ್ ಕಳುಹಿಸಿದ್ದರು.
ತಕ್ಷಣ ಸಂಬಂಧಿಕರು ಹುಡುಕಾಟ ಆರಂಭಿಸಿದ್ದು ಟೋಲ್ಗೇಟ್ ಹಿಂಬದಿಯ ಸರಕಾರಿ ಹಾಡಿಯಲ್ಲಿ ಸುರೇಶ್ ಮೃತದೇಹವು ಗೇರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುರೇಶ ಪೂಜಾರಿ ವಿರುದ್ದ ಕಳೆದ ವರ್ಷ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಿಂದ ಸುರೇಶ್ ನಿರ್ವಹಿಸುತ್ತಿದ್ದ ಕೋರ್ಟ್ ಪ್ರೋಸೆಸ್ ಕೆಲಸದಿಂದ ಅಮಾನತಾಗಿದ್ದು ಈವರೆಗೆ ರಿವೋಕ್ ಆಗಿರಲಿಲ್ಲ. ಈ ಬಗ್ಗೆ ನಿತ್ಯ ಪೊಲೀಸ್ ಠಾಣೆಗೆ ಅಲೆದಾಡುತ್ತಿದ್ದರು. ಕೆಲಸವಿಲ್ಲದ ಚಿಂತೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರೇಶ್ ಕಂಬಳದ ಪ್ರೋತ್ಸಾಹಕ, ಸಂಘಟಕನಾಗಿದ್ದು, ಕಂಬಳದ ಹಗ್ಗದ ವಿಭಾಗದ ಓಟಗಾರರಾಗಿದ್ದರು. ಅಲ್ಲದೆ ಇತ್ತೀಚೆಗೆ ಕಂಬಳದಲ್ಲಿ ಓಟದ ಮಾಪನ ಮಾಡುವ ಸುಧಾರಿತ ಸೆನ್ಸಾರ್ ಯಂತ್ರವನ್ನು ನಿರ್ವಹಿಸುತ್ತಿದ್ದರು. ಕ್ರಿಯಾಶೀಲ ವ್ಯಕ್ತಿಯಾಗಿದ್ದ ಸುರೇಶ್ ಸ್ನೇಹಜೀವಿಯಾಗಿ ಗುರುತಿಸಿಕೊಂಡಿದ್ದರು.
Kundapur Kambala racer commits suicide after losing job.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm