ಬ್ರೇಕಿಂಗ್ ನ್ಯೂಸ್
13-02-23 08:37 pm Mangalore Correspondent ಕರಾವಳಿ
ಉಳ್ಳಾಲ, ಫೆ.13: ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಉಳ್ಳಾಲದ ಉಳಿಯದಲ್ಲಿ ನಡೆದಿದೆ. ಫಿಶ್ ಮೀಲ್ ಕಾರ್ಖಾನೆಗಳಿಂದ ಬಿಡುವ ವಿಷಯುಕ್ತ ತ್ಯಾಜ್ಯ ನದಿನೀರಿನಲ್ಲಿ ಮಿಶ್ರಣಗೊಂಡ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿರುವ ಬಗ್ಗೆ ಮಾಲೀಕರು ಶಂಕೆ ವ್ಯಕ್ತಪಡಿಸಿದ್ದಾರೆ.
ಉಳಿಯ ನಿವಾಸಿ ಬ್ಲೇರಾ ಡಿಸೋಜ ಎಂಬವರಿಗೆ ಸೇರಿದ ಸಾವಿರಾರು ಸಾಕು ಮೀನುಗಳು ಸಾವನ್ನಪ್ಪಿವೆ. 3.5 ಲಕ್ಷ ರೂಪಾಯಿ ಬೆಲೆಬಾಳುವ ಮೀನುಗಳು ಸಾವನ್ನಪ್ಪಿದ್ದು ನಷ್ಟ ಅನುಭವಿಸಿದ್ದಾರೆ. ಮುದ್ರಾ ಯೋಜನೆಯಡಿ ಸಾಲ ಮಾಡಿ ಬ್ಲೇರಾ ಅವರು ಮೀನಿನ ಕೃಷಿ ಆರಂಭಿಸಿದ್ದರು. ಎರಡು ವರ್ಷಗಳ ಹಿಂದೆ ವೃತ್ತಿಯನ್ನು ಆರಂಭಿಸಿದ ಬ್ಲೇರಾ ಅವರಿಗೆ ಇದೀಗ ಎರಡನೇ ಬಾರಿಯ ಮೀನಿನ ಕೃಷಿ ಸಂಪೂರ್ಣ ನಷ್ಟವನ್ನು ಉಂಟು ಮಾಡಿದೆ.


2022 ರ ನವೆಂಬರ್ ತಿಂಗಳಲ್ಲಿ ಈ ಬಾರಿಯ ಪಂಜರ ಕೃಷಿಯ ಮರಿಗಳನ್ನು ಹಾಕಲಾಗಿತ್ತು. ಪ್ಯಾಂಪೆನೋ ತಳಿಯ 4,500 ಮರಿಗಳು ಬೃಹತ್ ಗಾತ್ರದಲ್ಲಿ ಬೆಳೆದಿತ್ತು. ಒಂದೂವರೆ ವರ್ಷದಿಂದ ಮೀನು ಯಾವುದೇ ತೊಂದರೆಯಿಲ್ಲದೆ ಇತ್ತು. ಫೆ.11 ರಂದು ಬೆಳಗ್ಗೆ ಬ್ಲೇರಾ ಅವರು ನದಿ ಬದಿಗೆ ತೆರಳಿದಾಗ 22 ಮೀನುಗಳು ಸಾವನ್ನಪ್ಪಿದ್ದವು. ಆನಂತರ ಇಂದು ಪಂಜರದಲ್ಲಿದ್ದಂತಹ ಎಲ್ಲಾ ಮೀನುಗಳು ಸಾವನ್ನಪ್ಪಿದ್ದು ನದಿ ನೀರಿನಲ್ಲಿ ತೇಲುತ್ತಿತ್ತು. ಜೊತೆಗೆ ಪಚ್ಚಿಳೆ(ಚಿಪ್ಪಿನ ಮೀನು) ಕೂಡ ಬಾಯ್ತೆರೆದಿದೆ. ನದಿ ನೀರು ಮಲಿನದಿಂದ ಘಟನೆ ಸಂಭವಿಸಿರುವ ಶಂಕೆ ಇದೆ.


ಕಾರ್ಖಾನೆಯಿಂದ ಹೊರಬಿಡುವ ರಾಸಾಯನಿಕ ಮಿಶ್ರಿತ ತ್ಯಾಜ್ಯ ನೀರಿನಿಂದ ಘಟನೆ ಸಂಭವಿಸಿರುವ ಶಂಕೆ ಇದ್ದು, ಎಕ್ಕೂರು ಮೀನುಗಾರಿಕಾ ವಿಜ್ಞಾನ ವಿಶ್ವವಿದ್ಯಾನಿಲಯದ ವಿಜ್ಞಾನಿ ಹಾಗೂ ಮೀನುಗಾರಿಕಾ ಇಲಾಖೆಯವರು ಭೇಟಿ ನೀಡಿ ನೀರಿನ ಸ್ಯಾಂಪಲ್ ಅನ್ನು ಪರೀಕ್ಷೆಗೆ ಕೊಂಡೊಯ್ದಿದ್ದಾರೆ.
A large number of fish reared by pisciculture in Netravati river have died. The owners have suspected that poisonous effluents which are being released into the river have contaminated the water resulting in their death. The fish being reared by Blara D’ Souza worth Rs 2.5 lacs have died. Blara D’ Souza had started rearing the fish after taking a loan from Mudra bank two years ago.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am