ಬ್ರೇಕಿಂಗ್ ನ್ಯೂಸ್
14-02-23 07:47 pm Mangalore Correspondent ಕರಾವಳಿ
ಮಂಗಳೂರು, ಫೆ.14 : ಗಣಿಗಾರಿಕೆಯಿಂದ ನಲುಗುತ್ತಿರುವ ಕಾರಿಂಜೇಶ್ವರ ದೇವಸ್ಥಾನದ ರಕ್ಷಣೆಗೆ ನಿಲ್ಲದ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಹಿಂದು ಜಾಗರಣ ವೇದಿಕೆ ಮುಂದಾಗಿದೆ. ರಾಜ್ಯ ಸರ್ಕಾರದ ಗಮನಸೆಳೆಯುವ ಯತ್ನವಾಗಿ ಶಿವರಾತ್ರಿಯಂದೇ ಶಿವಭಕ್ತರು ಮಾಲಾಧಾರಿಗಳಾಗಿ ಪಾದಯಾತ್ರೆ ನಡೆಸಲಿದ್ದಾರೆ.
ಈ ಬಗ್ಗೆ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. ಈ ಬಾರಿಯ ಶಿವರಾತ್ರಿಗೆ ಸಾವಿರಾರು ಭಕ್ತರು ಶಿವ ಮಾಲಾಧಾರಣೆ ಮಾಡಲಿದ್ದಾರೆ. ಫೆ.16ರಂದು ಮಾಲೆ ಧರಿಸಿ 18ರ ಶಿವರಾತ್ರಿಯಂದು ವಗ್ಗದಿಂದ ಪಾದಯಾತ್ರೆ ನಡೆಸಲಿದ್ದಾರೆ. ಕಾರಿಂಜೇಶ್ವರ ದೇವರ ಮುಂಭಾಗದಲ್ಲಿ ಕೋಟಿ ಜಪಯಜ್ಞ ನಡೆಸಲಿದ್ದಾರೆ ಎಂದು ಹೇಳಿದರು.
ಬಂಟ್ವಾಳದ ಕಾರಿಂಜೇಶ್ವರ ಬೆಟ್ಟದಲ್ಲಿ ನೆಲೆಯಾಗಿರುವ ಶಿವನ ಸನ್ನಿಧಾನ ಅತ್ಯಂತ ಅಪರೂಪದ ದೇವಸ್ಥಾನ. ಏಕಶಿಲಾ ಬೆಟ್ಟದಲ್ಲಿ ಶಿವನ ಆಲಯವಿದೆ. ಇದರ ಸನಿಹದಲ್ಲಿ ಕಲ್ಲು ಗಣಿಗಾರಿಕೆ, ಸ್ಫೋಟ ನಡೆಸಿದರೆ ಈ ಬೆಟ್ಟಕ್ಕೆ ಧಕ್ಕೆಯಾಗಲಿದೆ. ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸಿದರೂ ರಾಜ್ಯ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ. ಎರಡು ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡಬೇಕೆಂಬ ನಮ್ಮ ಆಗ್ರಹವನ್ನು ಮನ್ನಣೆ ನೀಡಿಲ್ಲ ಎಂದರು.
ಎರಡು ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಹೋಗಿದೆ. ಈ ಬಗ್ಗೆ ಆದೇಶ ಬಂದಿಲ್ಲ. ಇದರ ನಡುವೆ, ಗಣಿಗಾರಿಕೆ ನಡೆಸುವವರು ಹೈಕೋರ್ಟಿಗೆ ಅಪೀಲು ಮಾಡಿ ತಮ್ಮ ಪರವಾಗಿ ಆದೇಶ ತರಿಸಿದ್ದಾರೆ. ಹೀಗಾಗಿ ಕಾರಿಂಜ ಬೆಟ್ಟ ಇರುವ ಜಾಗವನ್ನು ಧಾರ್ಮಿಕ ಸೂಕ್ಷ್ಮ ವಲಯ ಎಂದು ಘೋಷಿಸಲು ಒತ್ತಾಯಿಸಿ ಮಾಲಾಧಾರಣೆ ಮಾಡುತ್ತಿದ್ದೇವೆ. ಆಮೂಲಕ ಬೆಟ್ಟದ ರಕ್ಷಣೆಗೆ ದೇವರ ಮೊರೆ ಹೋಗುತ್ತೇವೆ. ಸರಕಾರಕ್ಕೆ ಒಳ್ಳೆಯ ಬುದ್ಧಿ ಕೊಡಲೆಂದು ಪ್ರಾರ್ಥಿಸುತ್ತೇವೆ ಎಂದರು.
ಹಿಂದು ಜಾಗರಣ ವೇದಿಕೆಯ ವತಿಯಿಂದ ಎರಡು ವರ್ಷಗಳ ಹಿಂದೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇದೇ ವಿಚಾರದಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಚುನಾವಣೆ ಹೊತ್ತಿಗೆ ಮತ್ತೊಂದು ಸುತ್ತಿನ ಹೋರಾಟಕ್ಕೆ ಕಾರ್ಯಕರ್ತರು ಮುಂದಾಗಿದ್ದಾರೆ.
Quarry units functioning near Karinjeshwara Temple, Hindu Jagarana Vedike to hold padayatre in Mangalore
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm