ಬ್ರೇಕಿಂಗ್ ನ್ಯೂಸ್
14-02-23 07:47 pm Mangalore Correspondent ಕರಾವಳಿ
ಮಂಗಳೂರು, ಫೆ.14 : ಗಣಿಗಾರಿಕೆಯಿಂದ ನಲುಗುತ್ತಿರುವ ಕಾರಿಂಜೇಶ್ವರ ದೇವಸ್ಥಾನದ ರಕ್ಷಣೆಗೆ ನಿಲ್ಲದ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಹಿಂದು ಜಾಗರಣ ವೇದಿಕೆ ಮುಂದಾಗಿದೆ. ರಾಜ್ಯ ಸರ್ಕಾರದ ಗಮನಸೆಳೆಯುವ ಯತ್ನವಾಗಿ ಶಿವರಾತ್ರಿಯಂದೇ ಶಿವಭಕ್ತರು ಮಾಲಾಧಾರಿಗಳಾಗಿ ಪಾದಯಾತ್ರೆ ನಡೆಸಲಿದ್ದಾರೆ.
ಈ ಬಗ್ಗೆ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. ಈ ಬಾರಿಯ ಶಿವರಾತ್ರಿಗೆ ಸಾವಿರಾರು ಭಕ್ತರು ಶಿವ ಮಾಲಾಧಾರಣೆ ಮಾಡಲಿದ್ದಾರೆ. ಫೆ.16ರಂದು ಮಾಲೆ ಧರಿಸಿ 18ರ ಶಿವರಾತ್ರಿಯಂದು ವಗ್ಗದಿಂದ ಪಾದಯಾತ್ರೆ ನಡೆಸಲಿದ್ದಾರೆ. ಕಾರಿಂಜೇಶ್ವರ ದೇವರ ಮುಂಭಾಗದಲ್ಲಿ ಕೋಟಿ ಜಪಯಜ್ಞ ನಡೆಸಲಿದ್ದಾರೆ ಎಂದು ಹೇಳಿದರು.
ಬಂಟ್ವಾಳದ ಕಾರಿಂಜೇಶ್ವರ ಬೆಟ್ಟದಲ್ಲಿ ನೆಲೆಯಾಗಿರುವ ಶಿವನ ಸನ್ನಿಧಾನ ಅತ್ಯಂತ ಅಪರೂಪದ ದೇವಸ್ಥಾನ. ಏಕಶಿಲಾ ಬೆಟ್ಟದಲ್ಲಿ ಶಿವನ ಆಲಯವಿದೆ. ಇದರ ಸನಿಹದಲ್ಲಿ ಕಲ್ಲು ಗಣಿಗಾರಿಕೆ, ಸ್ಫೋಟ ನಡೆಸಿದರೆ ಈ ಬೆಟ್ಟಕ್ಕೆ ಧಕ್ಕೆಯಾಗಲಿದೆ. ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸಿದರೂ ರಾಜ್ಯ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ. ಎರಡು ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡಬೇಕೆಂಬ ನಮ್ಮ ಆಗ್ರಹವನ್ನು ಮನ್ನಣೆ ನೀಡಿಲ್ಲ ಎಂದರು.
ಎರಡು ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಹೋಗಿದೆ. ಈ ಬಗ್ಗೆ ಆದೇಶ ಬಂದಿಲ್ಲ. ಇದರ ನಡುವೆ, ಗಣಿಗಾರಿಕೆ ನಡೆಸುವವರು ಹೈಕೋರ್ಟಿಗೆ ಅಪೀಲು ಮಾಡಿ ತಮ್ಮ ಪರವಾಗಿ ಆದೇಶ ತರಿಸಿದ್ದಾರೆ. ಹೀಗಾಗಿ ಕಾರಿಂಜ ಬೆಟ್ಟ ಇರುವ ಜಾಗವನ್ನು ಧಾರ್ಮಿಕ ಸೂಕ್ಷ್ಮ ವಲಯ ಎಂದು ಘೋಷಿಸಲು ಒತ್ತಾಯಿಸಿ ಮಾಲಾಧಾರಣೆ ಮಾಡುತ್ತಿದ್ದೇವೆ. ಆಮೂಲಕ ಬೆಟ್ಟದ ರಕ್ಷಣೆಗೆ ದೇವರ ಮೊರೆ ಹೋಗುತ್ತೇವೆ. ಸರಕಾರಕ್ಕೆ ಒಳ್ಳೆಯ ಬುದ್ಧಿ ಕೊಡಲೆಂದು ಪ್ರಾರ್ಥಿಸುತ್ತೇವೆ ಎಂದರು.
ಹಿಂದು ಜಾಗರಣ ವೇದಿಕೆಯ ವತಿಯಿಂದ ಎರಡು ವರ್ಷಗಳ ಹಿಂದೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇದೇ ವಿಚಾರದಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಚುನಾವಣೆ ಹೊತ್ತಿಗೆ ಮತ್ತೊಂದು ಸುತ್ತಿನ ಹೋರಾಟಕ್ಕೆ ಕಾರ್ಯಕರ್ತರು ಮುಂದಾಗಿದ್ದಾರೆ.
Quarry units functioning near Karinjeshwara Temple, Hindu Jagarana Vedike to hold padayatre in Mangalore
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm