ಬ್ರೇಕಿಂಗ್ ನ್ಯೂಸ್
21-10-20 01:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಕೃಷ್ಣಾಷ್ಟಮಿಯಂದು ಪುಟಾಣಿ ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ, ಸಂಭ್ರಮಿಸುವುದನ್ನು ನೋಡಿದ್ದೇವೆ. ಈ ಬಾರಿ ಗಣೇಶೋತ್ಸವ, ನವರಾತ್ರಿಗೂ ಆ ಟ್ರೆಂಡ್ ಮುಂದುವರಿದಿದೆ. ನವರಾತ್ರಿಯ ಸಂಭ್ರಮದ ನಡುವೆ ತಮ್ಮ ಮಗುವನ್ನೂ ನವದುರ್ಗೆಯಾಗಿ ನೋಡಲು ಹೆತ್ತವರು ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ನುರಿತ ಛಾಯಾಗ್ರಾಹಕರ ಕೈಚಳಕದಲ್ಲಿ ಮೂಡಿಬಂದ ನವದುರ್ಗೆಯರ ಫೋಟೋಗಳು ಜಾಲತಾಣದಲ್ಲಿ ಈಗ ಭಾರೀ ವೈರಲ್ ಆಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಜಮಾನ ಉಪ್ಪಿನಕಾಯಿ ಮೂಲಕ ಫೇಮಸ್ ಆಗಿರುವ ಬಂಟ್ವಾಳದ ವರದರಾಯ ಪೈ – ಸಂಧ್ಯಾ ಪೈಯವರ ಮಗಳು ವಿಷ್ಣುಪ್ರಿಯಾ. ಸಂಗೀತ, ಭರತನಾಟ್ಯ, ಅಭಿನಯ ಚತುರೆ ಆಗಿರುವ ವಿಷ್ಣುಪ್ರಿಯಾಳನ್ನು ಈ ಬಾರಿ ಹೆತ್ತವರು ನವದುರ್ಗೆಯ ರೂಪದಲ್ಲಿ ಕಂಡಿದ್ದಾರೆ. ದೇವಿ ಲಕ್ಷ್ಮಿಯ ಅವತಾರಗಳಾಗಿರುವ ಆದಿಶಕ್ತಿ, ಸ್ಕಂದಮಾತ, ಭದ್ರಕಾಳಿ, ಶಾರದೆ, ಕಾತ್ಯಾಯಿನಿ, ಬ್ರಹ್ಮಚಾರಿಣಿ, ಮಹಾಗೌರಿ, ಸಿದ್ಧಿಧಾತ್ರಿ, ದುರ್ಗಾಮಾತೆ ಹೀಗೆ ನವರೂಪಗಳನ್ನು ಧರಿಸಿ, ಸಾಕ್ಷಾತ್ ನವಶಕ್ತಿಯರ ಅವತಾರಗಳಲ್ಲಿ ವಿಷ್ಣುಪ್ರಿಯಾಳನ್ನು ಫೋಟೋಶೂಟ್ ಮಾಡಿಸಿದ್ದಾರೆ. ಕಾರಿಂಜ ಮತ್ತು ಕುದ್ರೋಳಿ ದೇವಸ್ಥಾನಗಳಲ್ಲಿ ಈ ಫೋಟೋಗಳನ್ನು ಶೂಟ್ ಮಾಡಲಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ.




ಅಂದಹಾಗೆ, 4ನೇ ತರಗತಿ ಕಲಿಯುತ್ತಿರುವ ವಿಷ್ಣುಪ್ರಿಯಾ ಮೂಡುಬಿದ್ರೆ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿನಿ. ಬಾಲಕಿಯ ನವದುರ್ಗೆಯರ ಸ್ವರೂಪಗಳು ಮಂಗಳೂರಿನ ಛಾಯಾಗ್ರಾಹಕ ಪುನೀಕ್ ಶೆಟ್ಟಿ ಕ್ಯಾಮರಾ ಕಣ್ಣಲ್ಲಿ ಕಂಡಿದ್ದು ಹೀಗೆ..
ಇನ್ನಷ್ಟು ಪೋಟೋಗಳಿಗೆ: Photo Gallery
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm