ಬ್ರೇಕಿಂಗ್ ನ್ಯೂಸ್
21-10-20 02:03 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್, 21: ತೊಕ್ಕೊಟ್ಟಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಪಡಿತರ ಅಂಗಡಿಯಲ್ಲಿ ದಿನನಿತ್ಯವೂ ಸರ್ವರ್ ಸ್ಥಗಿತಗೊಳ್ಳುತ್ತಿದ್ದು ಇದರಿಂದ ಪಡಿತರಕ್ಕಾಗಿ ಆಗಮಿಸುವ ಜನರು ಸಂಕಷ್ಟ ಎದುರಿಸುವಂತಾಗಿದೆ. ನಿತ್ಯ ಸಂಕಷ್ಟ ಎದುರಾದ್ರೂ ಆಹಾರ ಇಲಾಖೆ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದರ ಬಗ್ಗೆ ಹಿಡಿಶಾಪ ಹಾಕುತ್ತಿದ್ದಾರೆ.
ಉಳ್ಳಾಲ ನಗರಸಭೆ ಮತ್ತು ಸೋಮೇಶ್ವರ ಪುರಸಭೆಯ ವ್ಯಾಪ್ತಿಯ ಕುಟುಂಬಗಳಿಗೆ ತೊಕ್ಕೊಟ್ಟು ಒಳಪೇಟೆಯ ಕೋಟೆಕಾರು ವ್ಯ.ಸೇ.ಸ. ಸಂಘದ ಕಟ್ಟಡದಲ್ಲಿ ಎರಡು ಪಡಿತರ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ರೇಷನ್ ಖರೀದಿಗಾಗಿ ದೂರದಿಂದ ಆಟೋ ರಿಕ್ಷಾದಲ್ಲಿ ಬರುವ ಜನಸಾಮಾನ್ಯರು ನಿತ್ಯ ಸರ್ವರ್ ಸಮಸ್ಯೆಯಿಂದ ಕಿರಿ ಕಿರಿ ಅನುಭವಿಸುವಂತಾಗಿದೆ. ಅಲ್ಲಿನ ಸಿಬಂದಿ, ಸರ್ವರ್ ಪ್ರತಿ ದಿನವೂ ನಿಧಾನಗತಿ ಅಥವಾ ಸ್ಥಗಿತಗೊಂಡಿದೆ ಎಂಬ ಕಾರಣ ನೀಡುತ್ತಿದ್ದಾರೆ. ಇದರಿಂದ ಜನರು ಮೈಲುದ್ದ ಸರತಿ ಸಾಲಲ್ಲಿ ನಿಂತು ಗಂಟೆಗಟ್ಟಲೆ ಕಾದರೂ ಸರ್ವರ್ ಸ್ಥಗಿತದಿಂದ ಕೊನೆಗೆ ಪಡಿತರ ಸಿಗದೆ ಹಿಂದಕ್ಕೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.
ಸಾಮಾನ್ಯವಾಗಿ ಇಲ್ಲಿ ಪ್ರತಿ ತಿಂಗಳ 10ನೇ ತಾರೀಖಿನಿಂದ 25 ರ ತನಕ ಪಡಿತರ ವಿತರಿಸಲಾಗುತ್ತದೆ. ಆರಂಭದಲ್ಲಿ ಜನಸಂದಣಿ ಜಾಸ್ತಿ ಇರುವುದರಿಂದ ಕೆಲವರಿಗೆ ಪಡಿತರ ದೊರಕುವುದಿಲ್ಲ. ತಿಂಗಳ ಕೊನೆಗೆ ಬಂದರೂ ಸರ್ವರ್ ಸಮಸ್ಯೆಯಿಂದ ಜನರು ಪಡಿತರ ವಂಚಿತರಾಗುತ್ತಿದ್ದಾರೆ. ಕೆಲವರ ಹೆಬ್ಬೆರಳು(ಥಂಬ್) ಅಚ್ಚು ಹೋಲಿಕೆ ಆಗದೆ ತಾಂತ್ರಿಕ ತೊಂದರೆಗಳು ಉಂಟಾಗಿ ಪಡಿತರ ಸಿಗದಂತಾಗುತ್ತದೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಆಹಾರ ಇಲಾಖೆಯ ಅಧಿಕಾರಿಗಳು ಇತ್ತ ಕಣ್ಣೆತ್ತಿಯೂ ನೋಡುತ್ತಿಲ್ಲ ಎನ್ನುತ್ತಾರೆ ಜನ.


ಈ ಹಿಂದೆ ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರು ಆಹಾರ ಇಲಾಖೆಯ ಸಚಿವರಾಗಿದ್ದಾಗ ಪಡಿತರ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಎದುರಾದಾಗ ಪರ್ಯಾಯವಾಗಿ ಜನಸಾಮಾನ್ಯರಿಗೆ ರಶೀದಿ ನೀಡಿ ರೇಶನ್ ವಿತರಿಸಲು ಆದೇಶಿಸಿದ್ದರು. ಆದರೆ ಇದೀಗ ಸರ್ವರ್ ಕೈಕೊಟ್ಟರೆ ಜನರು ಬರಿಗೈಯಲ್ಲಿ ಮನೆಗೆ ಹಿಂದಿರುಗುವ ಸ್ಥಿತಿ ಎದುರಾಗಿದೆ.
ಕೊರೊನ ಸಂಕಷ್ಟ ಕಾಲದಲ್ಲಿ ಕೆಲವು ಬಡ ಜನರು ಪಡಿತರ ಅಕ್ಕಿ, ವಸ್ತುಗಳನ್ನೇ ಅವಲಂಬಿಸಿದ್ದು , ಸಂಕಷ್ಟ ಕಾಲದಲ್ಲೂ ಸರಕಾರದಿಂದ ಸಿಗುವ ಸವಲತ್ತುಗಳನ್ನು ಸರ್ವರ್ ನೆಪದಲ್ಲಿ ಜನರು ಕಳಕೊಳ್ಳುವಂತಾಗಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm