ಬ್ರೇಕಿಂಗ್ ನ್ಯೂಸ್
16-02-23 10:51 pm Mangalore Correspondent ಕರಾವಳಿ
ಮಂಗಳೂರು, ಫೆ.16: ಬಂಟ್ವಾಳದ ತುಂಬೆಯಿಂದ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ನಗರದ ಕಂಕನಾಡಿಯ ಗರೋಡಿಯಲ್ಲಿ ಒಡೆದು ಹೋಗಿದ್ದು ರಸ್ತೆಯಲ್ಲಿ ನೀರು ನದಿಯಂತೆ ಹರಿದಿದೆ.
ಬುಧವಾರ ರಾತ್ರಿಯಿಂದಲೇ ನೀರು ಒಸರುತ್ತಿದ್ದು ಗುರುವಾರ ಸಂಜೆಯ ವೇಳೆಗೆ ನದಿಯ ರೂಪದಲ್ಲಿ ನೀರು ಹರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಖಾಸಗಿ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ತಾಗಿ ಪೈಪ್ ಒಡೆದಿದೆ ಎನ್ನಲಾಗಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದುದರಿಂದ ವಾಹನ ಸವಾರರು ಪರದಾಟ ಅನುಭವಿಸಿದರು. ಗರೋಡಿ ರಸ್ತೆಯಿಂದ ಪಂಪ್ವೆಲ್ ಬರುವ ರಸ್ತೆಯ ಉದ್ದಕ್ಕೂ ನೀರು ತೋಡಿನಂತೆ ಹರಿದಿದ್ದು ಬಳಿಕ ತುಂಬೆಯಿಂದಲೇ ನೀರಿನ ಹರಿವನ್ನು ನಿಲ್ಲಿಸಲಾಗಿದೆ.


ಈ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ಸಂದೀಪ್ ಗರೋಡಿ ಅವರನ್ನು ಕೇಳಿದಾಗ, ಬಂಟ್ವಾಳದ ನೇತ್ರಾವತಿಯಿಂದ ಮಂಗಳೂರು ಸಂಪರ್ಕಿಸುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದಿದೆ. ಗುರುವಾರ ಸಂಜೆ ವೇಳೆಗೆ ಜೆಸಿಬಿ ತಾಗಿ ಒಡೆದು ಹೋಗಿದ್ದು ನೀರು ರಸ್ತೆಯಲ್ಲೇ ಹರಿದು ಹೋಯಿತು. ಬಳಿಕ ನೀರಿನ ಪೂರೈಕೆಯನ್ನು ಸ್ಥಗಿತ ಮಾಡಲಾಯ್ತು ಎಂದು ತಿಳಿಸಿದ್ದಾರೆ.


ರಸ್ತೆಯಲ್ಲಿ ಪೂರ್ತಿ ನೀರು ಹರಿಯುತ್ತಿದ್ದರೂ, ನಿಲ್ಲಿಸಲಾಗದ ಪಾಲಿಕೆಯ ಆಡಳಿತದ ಬಗ್ಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದರು. ಮಳೆಗಾಲ ಅಲ್ಲದಿದ್ದರೂ, ಜೆಸಿಬಿ ಚಾಲಕನ ಎಡವಟ್ಟಿನಿಂದ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆ ಪೂರ್ತಿ ಕೆಸರುಮಯ ಆಗುವ ಸ್ಥಿತಿ ಎದುರಾಗಿದೆ.
#Mangalore #Garodi water pipe breaks out, #water goes wasted on road for hours pic.twitter.com/CXDVtleyUw
— Headline Karnataka (@hknewsonline) February 16, 2023
Mangalore Garodi water pipe breaks out, water goes wasted on road for hours near Garodi temple.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am