ಬ್ರೇಕಿಂಗ್ ನ್ಯೂಸ್
16-02-23 10:51 pm Mangalore Correspondent ಕರಾವಳಿ
ಮಂಗಳೂರು, ಫೆ.16: ಬಂಟ್ವಾಳದ ತುಂಬೆಯಿಂದ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ನಗರದ ಕಂಕನಾಡಿಯ ಗರೋಡಿಯಲ್ಲಿ ಒಡೆದು ಹೋಗಿದ್ದು ರಸ್ತೆಯಲ್ಲಿ ನೀರು ನದಿಯಂತೆ ಹರಿದಿದೆ.
ಬುಧವಾರ ರಾತ್ರಿಯಿಂದಲೇ ನೀರು ಒಸರುತ್ತಿದ್ದು ಗುರುವಾರ ಸಂಜೆಯ ವೇಳೆಗೆ ನದಿಯ ರೂಪದಲ್ಲಿ ನೀರು ಹರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಖಾಸಗಿ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ತಾಗಿ ಪೈಪ್ ಒಡೆದಿದೆ ಎನ್ನಲಾಗಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದುದರಿಂದ ವಾಹನ ಸವಾರರು ಪರದಾಟ ಅನುಭವಿಸಿದರು. ಗರೋಡಿ ರಸ್ತೆಯಿಂದ ಪಂಪ್ವೆಲ್ ಬರುವ ರಸ್ತೆಯ ಉದ್ದಕ್ಕೂ ನೀರು ತೋಡಿನಂತೆ ಹರಿದಿದ್ದು ಬಳಿಕ ತುಂಬೆಯಿಂದಲೇ ನೀರಿನ ಹರಿವನ್ನು ನಿಲ್ಲಿಸಲಾಗಿದೆ.
ಈ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ಸಂದೀಪ್ ಗರೋಡಿ ಅವರನ್ನು ಕೇಳಿದಾಗ, ಬಂಟ್ವಾಳದ ನೇತ್ರಾವತಿಯಿಂದ ಮಂಗಳೂರು ಸಂಪರ್ಕಿಸುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದಿದೆ. ಗುರುವಾರ ಸಂಜೆ ವೇಳೆಗೆ ಜೆಸಿಬಿ ತಾಗಿ ಒಡೆದು ಹೋಗಿದ್ದು ನೀರು ರಸ್ತೆಯಲ್ಲೇ ಹರಿದು ಹೋಯಿತು. ಬಳಿಕ ನೀರಿನ ಪೂರೈಕೆಯನ್ನು ಸ್ಥಗಿತ ಮಾಡಲಾಯ್ತು ಎಂದು ತಿಳಿಸಿದ್ದಾರೆ.
ರಸ್ತೆಯಲ್ಲಿ ಪೂರ್ತಿ ನೀರು ಹರಿಯುತ್ತಿದ್ದರೂ, ನಿಲ್ಲಿಸಲಾಗದ ಪಾಲಿಕೆಯ ಆಡಳಿತದ ಬಗ್ಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದರು. ಮಳೆಗಾಲ ಅಲ್ಲದಿದ್ದರೂ, ಜೆಸಿಬಿ ಚಾಲಕನ ಎಡವಟ್ಟಿನಿಂದ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆ ಪೂರ್ತಿ ಕೆಸರುಮಯ ಆಗುವ ಸ್ಥಿತಿ ಎದುರಾಗಿದೆ.
#Mangalore #Garodi water pipe breaks out, #water goes wasted on road for hours pic.twitter.com/CXDVtleyUw
— Headline Karnataka (@hknewsonline) February 16, 2023
Mangalore Garodi water pipe breaks out, water goes wasted on road for hours near Garodi temple.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm