ಬ್ರೇಕಿಂಗ್ ನ್ಯೂಸ್
16-02-23 10:51 pm Mangalore Correspondent ಕರಾವಳಿ
ಮಂಗಳೂರು, ಫೆ.16: ಬಂಟ್ವಾಳದ ತುಂಬೆಯಿಂದ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ನಗರದ ಕಂಕನಾಡಿಯ ಗರೋಡಿಯಲ್ಲಿ ಒಡೆದು ಹೋಗಿದ್ದು ರಸ್ತೆಯಲ್ಲಿ ನೀರು ನದಿಯಂತೆ ಹರಿದಿದೆ.
ಬುಧವಾರ ರಾತ್ರಿಯಿಂದಲೇ ನೀರು ಒಸರುತ್ತಿದ್ದು ಗುರುವಾರ ಸಂಜೆಯ ವೇಳೆಗೆ ನದಿಯ ರೂಪದಲ್ಲಿ ನೀರು ಹರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಖಾಸಗಿ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ತಾಗಿ ಪೈಪ್ ಒಡೆದಿದೆ ಎನ್ನಲಾಗಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದುದರಿಂದ ವಾಹನ ಸವಾರರು ಪರದಾಟ ಅನುಭವಿಸಿದರು. ಗರೋಡಿ ರಸ್ತೆಯಿಂದ ಪಂಪ್ವೆಲ್ ಬರುವ ರಸ್ತೆಯ ಉದ್ದಕ್ಕೂ ನೀರು ತೋಡಿನಂತೆ ಹರಿದಿದ್ದು ಬಳಿಕ ತುಂಬೆಯಿಂದಲೇ ನೀರಿನ ಹರಿವನ್ನು ನಿಲ್ಲಿಸಲಾಗಿದೆ.


ಈ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ಸಂದೀಪ್ ಗರೋಡಿ ಅವರನ್ನು ಕೇಳಿದಾಗ, ಬಂಟ್ವಾಳದ ನೇತ್ರಾವತಿಯಿಂದ ಮಂಗಳೂರು ಸಂಪರ್ಕಿಸುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದಿದೆ. ಗುರುವಾರ ಸಂಜೆ ವೇಳೆಗೆ ಜೆಸಿಬಿ ತಾಗಿ ಒಡೆದು ಹೋಗಿದ್ದು ನೀರು ರಸ್ತೆಯಲ್ಲೇ ಹರಿದು ಹೋಯಿತು. ಬಳಿಕ ನೀರಿನ ಪೂರೈಕೆಯನ್ನು ಸ್ಥಗಿತ ಮಾಡಲಾಯ್ತು ಎಂದು ತಿಳಿಸಿದ್ದಾರೆ.


ರಸ್ತೆಯಲ್ಲಿ ಪೂರ್ತಿ ನೀರು ಹರಿಯುತ್ತಿದ್ದರೂ, ನಿಲ್ಲಿಸಲಾಗದ ಪಾಲಿಕೆಯ ಆಡಳಿತದ ಬಗ್ಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದರು. ಮಳೆಗಾಲ ಅಲ್ಲದಿದ್ದರೂ, ಜೆಸಿಬಿ ಚಾಲಕನ ಎಡವಟ್ಟಿನಿಂದ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆ ಪೂರ್ತಿ ಕೆಸರುಮಯ ಆಗುವ ಸ್ಥಿತಿ ಎದುರಾಗಿದೆ.
#Mangalore #Garodi water pipe breaks out, #water goes wasted on road for hours pic.twitter.com/CXDVtleyUw
— Headline Karnataka (@hknewsonline) February 16, 2023
Mangalore Garodi water pipe breaks out, water goes wasted on road for hours near Garodi temple.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm