ಬ್ರೇಕಿಂಗ್ ನ್ಯೂಸ್
16-02-23 10:51 pm Mangalore Correspondent ಕರಾವಳಿ
ಮಂಗಳೂರು, ಫೆ.16: ಬಂಟ್ವಾಳದ ತುಂಬೆಯಿಂದ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ನಗರದ ಕಂಕನಾಡಿಯ ಗರೋಡಿಯಲ್ಲಿ ಒಡೆದು ಹೋಗಿದ್ದು ರಸ್ತೆಯಲ್ಲಿ ನೀರು ನದಿಯಂತೆ ಹರಿದಿದೆ.
ಬುಧವಾರ ರಾತ್ರಿಯಿಂದಲೇ ನೀರು ಒಸರುತ್ತಿದ್ದು ಗುರುವಾರ ಸಂಜೆಯ ವೇಳೆಗೆ ನದಿಯ ರೂಪದಲ್ಲಿ ನೀರು ಹರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಖಾಸಗಿ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ತಾಗಿ ಪೈಪ್ ಒಡೆದಿದೆ ಎನ್ನಲಾಗಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದುದರಿಂದ ವಾಹನ ಸವಾರರು ಪರದಾಟ ಅನುಭವಿಸಿದರು. ಗರೋಡಿ ರಸ್ತೆಯಿಂದ ಪಂಪ್ವೆಲ್ ಬರುವ ರಸ್ತೆಯ ಉದ್ದಕ್ಕೂ ನೀರು ತೋಡಿನಂತೆ ಹರಿದಿದ್ದು ಬಳಿಕ ತುಂಬೆಯಿಂದಲೇ ನೀರಿನ ಹರಿವನ್ನು ನಿಲ್ಲಿಸಲಾಗಿದೆ.


ಈ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ಸಂದೀಪ್ ಗರೋಡಿ ಅವರನ್ನು ಕೇಳಿದಾಗ, ಬಂಟ್ವಾಳದ ನೇತ್ರಾವತಿಯಿಂದ ಮಂಗಳೂರು ಸಂಪರ್ಕಿಸುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದಿದೆ. ಗುರುವಾರ ಸಂಜೆ ವೇಳೆಗೆ ಜೆಸಿಬಿ ತಾಗಿ ಒಡೆದು ಹೋಗಿದ್ದು ನೀರು ರಸ್ತೆಯಲ್ಲೇ ಹರಿದು ಹೋಯಿತು. ಬಳಿಕ ನೀರಿನ ಪೂರೈಕೆಯನ್ನು ಸ್ಥಗಿತ ಮಾಡಲಾಯ್ತು ಎಂದು ತಿಳಿಸಿದ್ದಾರೆ.


ರಸ್ತೆಯಲ್ಲಿ ಪೂರ್ತಿ ನೀರು ಹರಿಯುತ್ತಿದ್ದರೂ, ನಿಲ್ಲಿಸಲಾಗದ ಪಾಲಿಕೆಯ ಆಡಳಿತದ ಬಗ್ಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದರು. ಮಳೆಗಾಲ ಅಲ್ಲದಿದ್ದರೂ, ಜೆಸಿಬಿ ಚಾಲಕನ ಎಡವಟ್ಟಿನಿಂದ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆ ಪೂರ್ತಿ ಕೆಸರುಮಯ ಆಗುವ ಸ್ಥಿತಿ ಎದುರಾಗಿದೆ.
#Mangalore #Garodi water pipe breaks out, #water goes wasted on road for hours pic.twitter.com/CXDVtleyUw
— Headline Karnataka (@hknewsonline) February 16, 2023
Mangalore Garodi water pipe breaks out, water goes wasted on road for hours near Garodi temple.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm