ಬ್ರೇಕಿಂಗ್ ನ್ಯೂಸ್
17-02-23 02:20 pm Mangalore Correspondent ಕರಾವಳಿ
ಮಂಗಳೂರು, ಫೆ.17 : ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಸಾಮಾಜಿಕ ಮೌಲ್ಯವನ್ನು ಎತ್ತಿ ಹಿಡಿದು ಯುವಜನತೆಗೆ ಮಾರ್ಗದರ್ಶಕರಾಗಿ ಇರಬೇಕಾದವರು ಕೋಮು ಭಾವನೆ ಕೆರಳಿಸುವ ಕೆಟ್ಟ ಮನೋಸ್ಥಿತಿಗೆ ನಾಂದಿ ಹಾಡಿರುವುದು ಇಡೀ ರಾಜ್ಯಕ್ಕೆ ಮಾರಕ. ಇದು ಸಿದ್ದರಾಮಯ್ಯ ಅವರನ್ನು ನಿರ್ಭೀತಿಯಿಂದ ಕೆಲಸ ಮಾಡದಂತೆ ತಡೆಯುವ ಮತ್ತು ಜನರಿಗೆ ಅಪರಾಧ ಮಾಡಲು ಪ್ರಚೋದನೆ ನೀಡುವ ಹೇಯ ಕೃತ್ಯವಾಗಿದೆ ಎಂದು ಹೇಳಿದರು.

ಇಂಥವರಿಗೆ ಸಚಿವರಾಗಿ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆಯೂ ಇಲ್ಲ. ಕೂಡಲೇ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಐವಾನ್ ಡಿಸೋಜ ಹೇಳಿದರು. ಟಿಪ್ಪು ಪಾಠ ಪಠ್ಯದಲ್ಲಿದ್ದು, ಬ್ರಿಟಿಷರ ವಿರುದ್ಧದ ಹೋರಾಟ ಬಗ್ಗೆ ನಾವೆಲ್ಲ ಓದಿದ್ದೇವೆ. ಟಿಪ್ಪು ಪುಸ್ತಕಕ್ಕೆ ಮುನ್ನುಡಿ ಬರೆದಿರುವ ಜಗದೀಶ್ ಶೆಟ್ಟರ್, ಟಿಪ್ಪು ವೇಷ ಭೂಷಣ ಧರಿಸಿದ್ದ ಯಡಿಯೂರಪ್ಪ ಅವರಿಗೂ ನಿಮ್ಮ ಬಹಿರಂಗ ಹೇಳಿಕೆ ಇದು ಅನ್ವಯಿಸುತ್ತಾ.. ಅವರನ್ನು ಹೊಡೆದು ಹಾಕಲು ಕರೆ ಕೊಡುತ್ತೀರಾ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಬದ್ಧತೆ ಇರುವುದಾದರೆ, ಕೊಲೆಗೆ ಪ್ರಚೋದನೆ ನೀಡಿರುವ
ಅಶ್ವತ್ಥನಾರಾಯಣ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಬೇಕು. ಸಚಿವ ಸಂಪುಟದಿಂದ ಕಿತ್ತು ಹಾಕಬೇಕು. ನಾವು ಈಗಾಗಲೇ ಪೊಲೀಸ್ ಕಮೀಷನರ್ಗೆ ದೂರು ನೀಡಿದ್ದು, ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಬೇಕು. ಇದನ್ನು ಮಾಡದಿದ್ದರೆ, ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡರಾದ ಕೋಡಿಜಾಲ್ ಇಬ್ರಾಹಿಂ, ಅಪ್ಪಿ, ಸಬಿತಾ ಮಿಸ್ಕಿತ್, ಪ್ರಕಾಶ್ ಸಾಲ್ಯಾನ್, ಭಾಸ್ಕರ ರಾವ್ ಮತ್ತಿರರಿದ್ದರು.
Bjp Ashwath Narayan comment on Siddaramaiah, Ivan dsouza in Mangalore says throw ashwath out of cabinet.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm