ಬ್ರೇಕಿಂಗ್ ನ್ಯೂಸ್
17-02-23 03:34 pm Mangalore Correspondent ಕರಾವಳಿ
ಮಂಗಳೂರು, ಫೆ.17: ನಗರದ ಸ್ಟೇಟ್ಬ್ಯಾಂಕ್ ಸಮೀಪದ ಸರ್ವಿಸ್ ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆಯಾಗಿದ್ದು, ಸ್ಥಳೀಯರ ಮಾಹಿತಿಯಂತೆ ಪೊಲೀಸರು ವೆನ್ಲಾಕ್ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಸೇರಿಸಿದ್ದಾರೆ.
ಹೆತ್ತವರು ಮಗುವನ್ನು ಬಿಟ್ಟು ಹೋಗಿದ್ದಾರೆ ಎನ್ನಲಾಗುತ್ತಿದ್ದು ಮಗುವಿನ ಆರೋಗ್ಯದಲ್ಲಿ ಏರುಪೇರು ಇದೆ, ತಲೆಯಲ್ಲಿ ಸಣ್ಣ ಪುಟ್ಟ ಗಾಯಗಳಿವೆ. ಮಗು ಪತ್ತೆಯಾದ ವೇಳೆ ಮೂಗಿಗೆ ಟ್ಯೂಬ್ ಹಾಕಿದ ಸ್ಥಿತಿಯಲ್ಲಿತ್ತು. ಗಂಡು ಮಗುವಾಗಿದ್ದು, ಜನಿಸಿ ಒಂದು ವಾರ ಆಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಸ್ಟೇಟ್ ಬ್ಯಾಂಕ್ ಬಳಿಯ ಬಸ್ ನಿಲ್ದಾಣದ ಲೈಟ್ ಕಂಬದ ಬುಡದಲ್ಲಿ ಮಗು ಇರಿಸಿದ್ದನ್ನು ನೋಡಿದ ಬಸ್ ಚಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ಲೇಡಿಗೋಷನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ತಪಾಸಣೆ ನಡೆಸಿ ವೆನ್ಲಾಕ್ ಗೆ ದಾಖಲಿಸಲಾಗಿದೆ. ಮಗುವಿನ ಆರೋಗ್ಯ ಸ್ಥಿರವಾಗಿರದ ಕಾರಣ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸರ್ವಿಸ್ ಬಸ್ ನಿಲ್ದಾಣದಲ್ಲಿ ಒಬ್ಬ ಗಂಡಸು ಹಾಗೂ ಹೆಂಗಸು ಮಗು ಹಿಡಿದುಕೊಂಡಿದ್ದನ್ನು ಸ್ಥಳೀಯರು ನೋಡಿದ್ದರು. ಮಗುವನ್ನು ಯಾರು ಬಿಟ್ಟು ಹೋಗಿದ್ದಾರೆ ಎನ್ನುವ ಕುರಿತಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
New born baby found at service bus stand in Mangalore
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm