ಬ್ರೇಕಿಂಗ್ ನ್ಯೂಸ್
18-02-23 02:30 pm Mangalore Correspondent ಕರಾವಳಿ
ಮಂಗಳೂರು, ಫೆ.18: ಮೂರು ಬಿಜೆಪಿ ಶಾಸಕರು ಇರುವ ಕೊಡಗು ಜಿಲ್ಲೆಗೆ ನೂರು ಕೋಟಿ ವಿಶೇಷ ಅನುದಾನ ನೀಡಲಾಗಿದೆ. ಆದರೆ ಕರಾವಳಿಯಲ್ಲಿ 12 ಬಿಜೆಪಿ ಶಾಸಕರಿದ್ದರೂ ಯಾವುದೇ ಅನುದಾನ ತರಲಿಲ್ಲ. ಕರಾವಳಿ ಜನರಿಗೆ ಇವರು ಮೋಸ ಮಾಡಿದ್ದಾರೆ. ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಾತನ್ನು ಕೇಳಿರಬೇಕು. ಕರಾವಳಿಗೆ ಲವ್ ಜಿಹಾದ್ ಸಾಕು, ಅಭಿವೃದ್ಧಿ ಬೇಡ ಎಂಬ ವಿಚಾರ ಸಿಎಂ ಕಿವಿಗೆ ಬಿದ್ದಿರಬೇಕು. ಹೀಗಾಗಿ ಈ ಭಾಗಕ್ಕೆ ಅನುದಾನವನ್ನೇ ಕೊಟ್ಟಿಲ್ಲ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಯುಟಿ ಖಾದರ್ ವ್ಯಂಗ್ಯವಾಡಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಮೋಸ ಮಾಡಲಾಗಿದೆ. ಮೀನುಗಾರರನ್ನೂ ಮೋಸ ಮಾಡುತ್ತಿದ್ದಾರೆ. ರಸ್ತೆ, ಶೈಕ್ಷಣಿಕ, ಪಶು ಸಂಗೋಪನೆ ವಿಚಾರದಲ್ಲಿ ಜಿಲ್ಲೆಗೆ ಮೋಸ ಮಾಡಲಾಗಿದೆ. ಪಶು ಸಂಗೋಪನೆಯ ಆಂಬುಲೆನ್ಸ್ ಡ್ರೈವರ್ ಗಳನ್ನು ಇನ್ನೂ ನೇಮಕ ಮಾಡಿಲ್ಲ. ರಾಜ್ಯದ ಜನರಿಗೆ ಪ್ರಯೋಜನ ಇಲ್ಲದ, ಜನರನ್ನು ಮೂರ್ಖರನ್ನಾಗಿ ಮಾಡುವ ಬಜೆಟ್ ಮಂಡನೆ ಮಾಡಲಾಗಿದೆ.

ಮೀನುಗಾರರಿಗೆ ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಿಸಿದ ಮನೆಗಳೇ ಇನ್ನೂ ನಿರ್ಮಾಣ ಆಗಿಲ್ಲ. ಸಮುದ್ರ ತೀರದಲ್ಲಿ ಕೊಂಡಿ ರಸ್ತೆ, ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರವನ್ನು ಕೊಟ್ಟಿಲ್ಲ. ಸಬ್ಸಿಡಿ ಸೀಮೆ ಎಣ್ಣೆಯನ್ನೂ ಕೊಟ್ಟಿಲ್ಲ, ಈಗ ಡಿಸೇಲ್ ಬಗ್ಗೆ ಹೇಳುತ್ತಿದ್ದಾರೆ.


ರಾಜ್ಯದ ಜನರಿಗೆ ಸಾಲದ ಹೊರೆ
ರಾಜ್ಯದ ಸಂಸದರ ಮೌನ, ಸರ್ಕಾರದ ಅಸಹಾಯಕತೆ, ಕೇಂದ್ರದ ಮಲತಾಯಿ ಧೋರಣೆಯಿಂದ ರಾಜ್ಯ ಸಾಲದಲ್ಲಿ ಮುಳುಗಿದೆ. ರಾಜ್ಯ ಬಜೆಟ್ ಸುಲಿಗೆ ಮತ್ತು ಸಾಲದ ಬಜೆಟ್ ಆಗಿದೆ. ಕೊನೆಯುಸಿರು ಎಳೆಯುತ್ತಿರುವ ಸರ್ಕಾರ ಯಾವುದೇ ಮಹತ್ವ ಇಲ್ಲದ ಬಜೆಟ್ ಮಂಡಿಸಿದೆ. 1947ರಿಂದ 2018ರ ತನಕ ರಾಜ್ಯ ಸರ್ಕಾರದ ಸಾಲ ಇದ್ದಿದ್ದು 2,42,000 ಕೋಟಿ. 2018 ರಿಂದ 2023 ತನಕದ ನಾಲ್ಕು ವರ್ಷಗಳಲ್ಲಿ ಸರ್ಕಾರ 5,64,814 ಕೋಟಿ ರೂ. ಸಾಲ ತೆಗೆದುಕೊಂಡಿದೆ. ರಾಜ್ಯದ ಜನ ಸಾಲದ ಭಾರವನ್ನು ಹೊರೆಯುವಂತಾಗಿದೆ. ಬಿಜೆಪಿ ಮೂರು ವರ್ಷದಲ್ಲಿ 2,80,000 ಕೋಟಿ ರೂಪಾಯಿ ಸಾಲ ಮಾಡಿದೆ. ಈ ಬಾರಿ 78,000 ಕೋಟಿ ಸಾಲ ಮಾಡೋದಾಗಿ ಹೇಳಿದೆ. ಮೂರು ಲಕ್ಷ ಸಾವಿರ ಕೋಟಿಯ ಬಜೆಟ್ ನಲ್ಲಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಯಾವುದೇ ಅಂಶಗಳಿಲ್ಲ. ಇಷ್ಟು ದೊಡ್ಡ ಮೊತ್ತದ ಸಾಲ ಭರಿಸಲು 34 ಸಾವಿರ ಕೋಟಿ ರೂ. ಬಡ್ಡಿಯನ್ನು ಪ್ರತಿ ತಿಂಗಳು ರಾಜ್ಯ ಸರ್ಕಾರ ಕಟ್ಟಬೇಕಾಗಿದೆ. ಜಾತ್ರೋತ್ಸವ ಸಂದರ್ಭದಲ್ಲಿ ಬ್ಯಾಂಡ್ ಹೊಡೆಯುವಂತೆ ಸರ್ಕಾರ ಬಜೆಟ್ ಮಂಡಿಸಿದೆ ಎಂದು ಮೂದಲಿಸಿದರು.
Mangalore UT Khader slams Nalin Kateel over CMs Budget 2023, says DK has got nothing.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am