ಬ್ರೇಕಿಂಗ್ ನ್ಯೂಸ್
            
                        19-02-23 09:24 am HK News Desk ಕರಾವಳಿ
            ಉಳ್ಳಾಲ, ಫೆ.19 :ತಾಯಿ ಗದರಿದ್ದಕ್ಕೆ ಕೀಟ ನಾಶಕ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪಿಯು ಕಲಿಯುತ್ತಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ(17) ಮೃತ ವಿದ್ಯಾರ್ಥಿನಿ.
ಧನ್ಯ ನಗರದ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿನಿಯಾಗಿದ್ದಳು. ಫೆ.14 ರಂದು ಮಧ್ಯಾಹ್ನ ಧನ್ಯ ತಾಯಿ ಭವ್ಯ ಮನೆಗೆ ತೆರಳಿದಾಗ ಮನೆಯಲ್ಲಿ ಮಗಳು ಇರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಧನ್ಯಾ ಮನೆಗೆ ಮರಳಿದ್ದು ಈ ವೇಳೆ ತಾಯಿ ಮಗಳಲ್ಲಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿದ್ದು ಗೆಳತಿ ಮನೆಗೆ ಓದಲು ತೆರಳಿದ್ದೆ ಎಂದು ಧನ್ಯ ಹೇಳಿದ್ದಾಳೆ. ಗೆಳತಿ ಮನೆಗೆ ಹೋಗುವಾಗ ಫೋನ್ ಕರೆ ಏಕೆ ಮಾಡಿಲ್ಲ ಎಂದು ತಾಯಿ ಗದರಿದ್ದು ಎರಡು ಏಟು ಹೊಡೆದಿದ್ದರಂತೆ. ಬಳಿಕ ತಾಯಿ ಸಮೀಪದ ಮನೆಗೆ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಧನ್ಯ ಮನೆಯೊಳಗಿದ್ದ ಗೆದ್ದಲು ಹೊಡೆಯುವ ಕೀಟ ನಾಶಕವನ್ನ ಸೇವಿಸಿ ತೀರಾ ಅಸ್ವಸ್ಥಳಾಗಿದ್ದಾಳೆ, ಆಕೆಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಂಗಾಂಗ ನಿಷ್ಕ್ರಿಯಗೊಂಡ ಧನ್ಯಾ ಕೋಮಾ ಸ್ಥಿತಿಗೆ ತಲುಪಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಮೃತ ಧನ್ಯ ತಂದೆ ಸೋಮನಾಥ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ತಾಯಿ ಭವ್ಯ ಉಪ್ಪಿನ ಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿ ಸಂಜೆ ಹೊತ್ತಲ್ಲಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ದಂಪತಿಯ ಇನ್ನೋರ್ವ ಕಿರಿಯ ಮಗ ಭುವನ್ ಹೈಸ್ಕೂಲ್ ಓದುತ್ತಿದ್ದಾನೆ.
            
            
            Mangalore 17 year old girl consumes poison in Kumpala commits suicide, dies in hospital. The deceased has been identified as Dhanya. Because Mother questioned her of not picking the call it is said she took this step.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm