ಬ್ರೇಕಿಂಗ್ ನ್ಯೂಸ್
19-02-23 04:43 pm Mangalore Correspondent ಕರಾವಳಿ
ಬಂಟ್ವಾಳ, ಫೆ.19 : ಶೈಕ್ಷಣಿಕ ಕಾರ್ಯಾಗಾರ ಹೆಸರಿನಲ್ಲಿ ಶಾಲಾ ಮಕ್ಕಳನ್ನು ಕರೆಸಿ ಇಸ್ಲಾಂ ಬಗ್ಗೆ ಬೋಧನೆ ಮಾಡಿದ್ದಾರೆಂದು ಆರೋಪಿಸಿ ಹಿಂದು ಸಂಘಟನೆ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ಹಿಂದು ಮಕ್ಕಳನ್ನು ಹೊರಕ್ಕೆ ತೆರಳುವಂತೆ ಒತ್ತಾಯ ಪಡಿಸಿದ ಘಟನೆ ವಿಟ್ಲ ಬಳಿಯ ಅಡ್ಯನಡ್ಕ ಎಂಬಲ್ಲಿ ನಡೆದಿದೆ.
ನುಸ್ರತುಲ್ ಯಂಗ್ ಮೆನ್ಸ್ ಅಸೋಸಿಯೇಷನ್ ಸಂಸ್ಥೆ ವತಿಯಿಂದ ಕೇಪು ಗ್ರಾಮದ ಅಡ್ಯನಡ್ಕದ ರಾಜಕಮಲ್ ಎಂಬ ಖಾಸಗಿ ಸಭಾಂಗಣದಲ್ಲಿ ಶನಿವಾರ ಸಂಜೆ ಶೈಕ್ಷಣಿಕ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಕಾರ್ಯಾಗಾರಕ್ಕೆ ಸ್ಥಳೀಯ ಜನತಾ ವಿದ್ಯಾಸಂಸ್ಥೆಯ ಶಾಲಾ ವಿದ್ಯಾರ್ಥಿಗಳನ್ನು ಕರೆಸಿದ್ದು ಅಲ್ಲಿ ಪ್ರವಾದಿ, ಇಸ್ಲಾಂ ಬಗ್ಗೆ ಬೋಧನೆ ಮಾಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಕೋಮು ಪ್ರಚೋದನೆ ರೀತಿ ಮತ ಪ್ರಚಾರ ನಡೆಸುತ್ತಿದ್ದಾರೆಂದು ಹೇಳಿ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ನಿಲ್ಲಿಸಿದ್ದಾರೆ.
ಅಲ್ಲದೆ, ಶಿವರಾತ್ರಿಯ ದಿನ ಶಾಲೆಗೆ ರಜೆ ಇದ್ದರೂ ಸಂಜೆ ವೇಳೆಗೆ ಮುಸ್ಲಿಂ ಸಂಘಟನೆಯ ಕಾರ್ಯಾಗಾರಕ್ಕೆ ಕಳುಹಿಸಿದ್ದ ಶಿಕ್ಷಕರ ಬಗ್ಗೆ ಹಿಂಜಾವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮಕ್ಕೆ ಬಂದು ಕುಳಿತಿದ್ದ ಹಿಂದು ವಿದ್ಯಾರ್ಥಿಗಳನ್ನು ಸ್ಥಳದಿಂದ ಎಬ್ಬಿಸಿ ಹೊರಕ್ಕೆ ಕಳಿಸಿದ್ದಾರೆ. ವಿಟ್ಲ ಪೊಲೀಸರನ್ನು ಸ್ಥಳಕ್ಕೆ ಕರೆಸಿ, ಈ ರೀತಿಯ ಕಾರ್ಯಕ್ರಮಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅನಂತರ, ಕಾರ್ಯಾಗಾರ ಅರ್ಧಕ್ಕೆ ರದ್ದಾಗಿದೆ.
ಈ ಬಗ್ಗೆ ವಿಟ್ಲ ಠಾಣೆಗೆ ಮಾಧವ ಮೂಲ್ಯ ಎಂಬವರು ದೂರು ನೀಡಿದ್ದು, ಶೈಕ್ಷಣಿಕ ಕಾರ್ಯಾಗಾರ ನೆಪದಲ್ಲಿ ವಿದ್ಯಾರ್ಥಿಗಳನ್ನು ಕರೆಸಿಕೊಂಡು ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿ ಪ್ರಚೋದನಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ಶಾಲಾ ಮುಖ್ಯೋಪಾಧ್ಯಾಯ ಟಿ.ಆರ್.ನಾಯಕ್, ರಫೀಕ್ ಮಾಸ್ಟರ್ ಆತೂರು ಹಾಗೂ ನುಸ್ರುತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಷನ್ ವಿರುದ್ಧ ದೂರು ದಾಖಲಿಸಿದ್ದಾರೆ.
Islam teaching in the name of Educational program at school in Vittal Dakshina Kannada, Hindu activists object and stop the program sending Hindu student's out of the school. A case has been registered at the Vittal police station.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm