ಬ್ರೇಕಿಂಗ್ ನ್ಯೂಸ್
20-02-23 05:34 pm Mangalore Correspondent ಕರಾವಳಿ
ಉಳ್ಳಾಲ, ಫೆ.20 : ಒಂಟಿಯಾಗಿ ವಾಸವಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಅಸಹಜವಾಗಿ ಮೃತಪಟ್ಟು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಪಾವೂರು ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ ಮಗ್ಗಿ ಮೊಂತೇರೊ (62) ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆ.16ರಂದು ಪುತ್ರಿ ಮನೆಗೆ ಬಂದು ತಾಯಿ ಜತೆಗೆ ಮಾತನಾಡಿ ತೆರಳಿದ್ದರು. ಆನಂತರ ಮೂರು ದಿನಗಳಿಂದ ಮೊಬೈಲ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪುತ್ರಿ ಇಂದು ಮನೆಗೆ ಬಂದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯೊಳಗೆ ಅಡುಗೆ ಕೋಣೆಯ ಒಲೆಯ ಸಮೀಪದಲ್ಲೇ ಮೃತದೇಹ ಬಿದ್ದ ಸ್ಥಿತಿಯಲ್ಲಿದೆ. ಅಸೌಖ್ಯದಿಂದ ಕೆಳಗೆ ಬಿದ್ದು ತಲೆಗೆ ಗಾಯಗೊಂಡು ಸಾವನ್ನಪ್ಪಿರುವ ಶಂಕೆಯನ್ನು ಕೊಣಾಜೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಶವ ಪೂರ್ತಿ ಕೊಳೆತಿದ್ದು ಹುಳ ಉಂಟಾಗಿದೆ. ಇದರಿಂದ ಸಾವು ಸಂಭವಿಸಿ ಮೂರ್ನಾಲ್ಕು ದಿನ ಕಳೆದಿರುವಂತೆ ಕಂಡಿದೆ.
ಸ್ಥಳೀಯರ ಜೊತೆಗೆ ಹೆಚ್ಚು ಮಾತನಾಡದೇ ಒಬ್ಬಂಟಿಯಾಗಿರುತ್ತಿದ್ದರು. ಮೂರು ಎಕರೆ ವ್ಯಾಪ್ತಿಯ ಜಾಗದ ಮಧ್ಯೆ ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರು. ಮಕ್ಕಳಿದ್ದರೂ ತಾಯಿ ಜೊತೆಗೆ ಇರುತ್ತಿರಲಿಲ್ಲ. ಅಪರೂಪಕ್ಕೆ ಮಾತನಾಡುವಾಗ ಗುಳಿಗ ದೈವದ ವಿಚಾರವನ್ನೇ ಮಗ್ಗಿ ಮೊಂತೇರೋ ಮಾತನಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಗುಳಿಗ ದೈವದ ಬಗ್ಗೆ ನಂಬಿಕೆ ಹೊಂದಿದ್ದರೋ, ಮಾನಸಿಕ ಭ್ರಾಂತಿಯಿಂದ ಹಾಗೆ ವರ್ತಿಸುತ್ತಿದ್ದರೋ ಗೊತ್ತಿಲ್ಲ ಎನ್ನುತ್ತಾರೆ, ಸ್ಥಳೀಯರು. ಅವರ ಪತಿ ಹತ್ತು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಮಕ್ಕಳು ದೂರವುಳಿದ ನಂತರ ಒಂಟಿಯಾಗಿದ್ದರು. ಸ್ಥಳಕ್ಕಾಗಮಿಸಿದ ಕೊಣಾಜೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
The mortal remains of a home alone woman were found in a decomposed state in the kitchen of her house at Deradka near Harekala on the outskirts of the city. The deceased is identified as Maggi Monteiro (62), wife of Jeeni D’Souza, a resident of Deradka, Harekala.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm