ಬ್ರೇಕಿಂಗ್ ನ್ಯೂಸ್
20-02-23 05:34 pm Mangalore Correspondent ಕರಾವಳಿ
ಉಳ್ಳಾಲ, ಫೆ.20 : ಒಂಟಿಯಾಗಿ ವಾಸವಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಅಸಹಜವಾಗಿ ಮೃತಪಟ್ಟು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಪಾವೂರು ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ ಮಗ್ಗಿ ಮೊಂತೇರೊ (62) ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆ.16ರಂದು ಪುತ್ರಿ ಮನೆಗೆ ಬಂದು ತಾಯಿ ಜತೆಗೆ ಮಾತನಾಡಿ ತೆರಳಿದ್ದರು. ಆನಂತರ ಮೂರು ದಿನಗಳಿಂದ ಮೊಬೈಲ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪುತ್ರಿ ಇಂದು ಮನೆಗೆ ಬಂದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮನೆಯೊಳಗೆ ಅಡುಗೆ ಕೋಣೆಯ ಒಲೆಯ ಸಮೀಪದಲ್ಲೇ ಮೃತದೇಹ ಬಿದ್ದ ಸ್ಥಿತಿಯಲ್ಲಿದೆ. ಅಸೌಖ್ಯದಿಂದ ಕೆಳಗೆ ಬಿದ್ದು ತಲೆಗೆ ಗಾಯಗೊಂಡು ಸಾವನ್ನಪ್ಪಿರುವ ಶಂಕೆಯನ್ನು ಕೊಣಾಜೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಶವ ಪೂರ್ತಿ ಕೊಳೆತಿದ್ದು ಹುಳ ಉಂಟಾಗಿದೆ. ಇದರಿಂದ ಸಾವು ಸಂಭವಿಸಿ ಮೂರ್ನಾಲ್ಕು ದಿನ ಕಳೆದಿರುವಂತೆ ಕಂಡಿದೆ.
ಸ್ಥಳೀಯರ ಜೊತೆಗೆ ಹೆಚ್ಚು ಮಾತನಾಡದೇ ಒಬ್ಬಂಟಿಯಾಗಿರುತ್ತಿದ್ದರು. ಮೂರು ಎಕರೆ ವ್ಯಾಪ್ತಿಯ ಜಾಗದ ಮಧ್ಯೆ ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರು. ಮಕ್ಕಳಿದ್ದರೂ ತಾಯಿ ಜೊತೆಗೆ ಇರುತ್ತಿರಲಿಲ್ಲ. ಅಪರೂಪಕ್ಕೆ ಮಾತನಾಡುವಾಗ ಗುಳಿಗ ದೈವದ ವಿಚಾರವನ್ನೇ ಮಗ್ಗಿ ಮೊಂತೇರೋ ಮಾತನಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಗುಳಿಗ ದೈವದ ಬಗ್ಗೆ ನಂಬಿಕೆ ಹೊಂದಿದ್ದರೋ, ಮಾನಸಿಕ ಭ್ರಾಂತಿಯಿಂದ ಹಾಗೆ ವರ್ತಿಸುತ್ತಿದ್ದರೋ ಗೊತ್ತಿಲ್ಲ ಎನ್ನುತ್ತಾರೆ, ಸ್ಥಳೀಯರು. ಅವರ ಪತಿ ಹತ್ತು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಮಕ್ಕಳು ದೂರವುಳಿದ ನಂತರ ಒಂಟಿಯಾಗಿದ್ದರು. ಸ್ಥಳಕ್ಕಾಗಮಿಸಿದ ಕೊಣಾಜೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
The mortal remains of a home alone woman were found in a decomposed state in the kitchen of her house at Deradka near Harekala on the outskirts of the city. The deceased is identified as Maggi Monteiro (62), wife of Jeeni D’Souza, a resident of Deradka, Harekala.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm