ಬ್ರೇಕಿಂಗ್ ನ್ಯೂಸ್
            
                        20-02-23 05:34 pm Mangalore Correspondent ಕರಾವಳಿ
            ಉಳ್ಳಾಲ, ಫೆ.20 : ಒಂಟಿಯಾಗಿ ವಾಸವಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಅಸಹಜವಾಗಿ ಮೃತಪಟ್ಟು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಪಾವೂರು ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ ಮಗ್ಗಿ ಮೊಂತೇರೊ (62) ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆ.16ರಂದು ಪುತ್ರಿ ಮನೆಗೆ ಬಂದು ತಾಯಿ ಜತೆಗೆ ಮಾತನಾಡಿ ತೆರಳಿದ್ದರು. ಆನಂತರ ಮೂರು ದಿನಗಳಿಂದ ಮೊಬೈಲ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪುತ್ರಿ ಇಂದು ಮನೆಗೆ ಬಂದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯೊಳಗೆ ಅಡುಗೆ ಕೋಣೆಯ ಒಲೆಯ ಸಮೀಪದಲ್ಲೇ ಮೃತದೇಹ ಬಿದ್ದ ಸ್ಥಿತಿಯಲ್ಲಿದೆ. ಅಸೌಖ್ಯದಿಂದ ಕೆಳಗೆ ಬಿದ್ದು ತಲೆಗೆ ಗಾಯಗೊಂಡು ಸಾವನ್ನಪ್ಪಿರುವ ಶಂಕೆಯನ್ನು ಕೊಣಾಜೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಶವ ಪೂರ್ತಿ ಕೊಳೆತಿದ್ದು ಹುಳ ಉಂಟಾಗಿದೆ. ಇದರಿಂದ ಸಾವು ಸಂಭವಿಸಿ ಮೂರ್ನಾಲ್ಕು ದಿನ ಕಳೆದಿರುವಂತೆ ಕಂಡಿದೆ.
ಸ್ಥಳೀಯರ ಜೊತೆಗೆ ಹೆಚ್ಚು ಮಾತನಾಡದೇ ಒಬ್ಬಂಟಿಯಾಗಿರುತ್ತಿದ್ದರು. ಮೂರು ಎಕರೆ ವ್ಯಾಪ್ತಿಯ ಜಾಗದ ಮಧ್ಯೆ ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರು. ಮಕ್ಕಳಿದ್ದರೂ ತಾಯಿ ಜೊತೆಗೆ ಇರುತ್ತಿರಲಿಲ್ಲ. ಅಪರೂಪಕ್ಕೆ ಮಾತನಾಡುವಾಗ ಗುಳಿಗ ದೈವದ ವಿಚಾರವನ್ನೇ ಮಗ್ಗಿ ಮೊಂತೇರೋ ಮಾತನಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಗುಳಿಗ ದೈವದ ಬಗ್ಗೆ ನಂಬಿಕೆ ಹೊಂದಿದ್ದರೋ, ಮಾನಸಿಕ ಭ್ರಾಂತಿಯಿಂದ ಹಾಗೆ ವರ್ತಿಸುತ್ತಿದ್ದರೋ ಗೊತ್ತಿಲ್ಲ ಎನ್ನುತ್ತಾರೆ, ಸ್ಥಳೀಯರು. ಅವರ ಪತಿ ಹತ್ತು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಮಕ್ಕಳು ದೂರವುಳಿದ ನಂತರ ಒಂಟಿಯಾಗಿದ್ದರು. ಸ್ಥಳಕ್ಕಾಗಮಿಸಿದ ಕೊಣಾಜೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
            
            
            The mortal remains of a home alone woman were found in a decomposed state in the kitchen of her house at Deradka near Harekala on the outskirts of the city. The deceased is identified as Maggi Monteiro (62), wife of Jeeni D’Souza, a resident of Deradka, Harekala.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm