ಬ್ರೇಕಿಂಗ್ ನ್ಯೂಸ್
21-02-23 03:38 pm Mangalore Correspondent ಕರಾವಳಿ
ಉಳ್ಳಾಲ, ಫೆ.21 : ಉಳ್ಳಾಲ ನಗರಸಭೆಯ 2023- 24ನೇ ಸಾಲಿನ ಬಜೆಟ್ ಇಂದು ಮಂಡನೆಯಾಗಿದ್ದು ಬಜೆಟನ್ನ ವಿರೋಧಿಸಿದ ಜೆಡಿಎಸ್ ಕೌನ್ಸಿಲರ್ ಗಳು ಕಿವಿಗೆ ಹೂವಿಟ್ಟು ಆಡಳಿತಾರೂಢ ಕಾಂಗ್ರೆಸ್ ನಾಯಕರನ್ನು ಅಣಕಿಸಿದ್ದಾರೆ.
ಇತ್ತೀಚೆಗೆ ರಾಜ್ಯ ಸರ್ಕಾರದ ಬಜೆಟ್ ಮಂಡನೆ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಸದನದಲ್ಲಿ ಕಿವಿಗೆ ಹೂ ಇಟ್ಟು ಬಿಜೆಪಿ ಸರಕಾರವನ್ನ ಅಣಕಿಸಿ ಗಮನ ಸೆಳೆದಿದ್ದರು. ಕಾಂಗ್ರೆಸ್ ಅಸ್ತ್ರವನ್ನೇ ಇದೀಗ ಜೆಡಿಎಸ್ ಉಳ್ಳಾಲ ನಗರ ಸದಸ್ಯರು ಬಳಸಿ ಆಡಳಿತಾರೂಢ ಕಾಂಗ್ರೆಸನ್ನ ಅಣಕಿಸಿದ್ದಾರೆ.




ಮಂಗಳವಾರ ಉಳ್ಳಾಲ ನಗರಸಭೆ ಆಡಳಿತ ಸೌಧದಲ್ಲಿ ಬಜೆಟ್ ಮಂಡನೆ ವೇಳೆ ಜೆಡಿಎಸ್ ಸದಸ್ಯರಾದ ದಿನಕರ ಉಳ್ಳಾಲ್, ಅಬ್ದುಲ್ ಬಶೀರ್, ಖಲೀಲ್, ಜಬ್ಬಾರ್, ಮುಶ್ತಾಕ್ ಪಟ್ಲ ಅವರು ಕಿವಿಗೆ ಹೂವಿಟ್ಟು ಬಜೆಟ್ ಬಗ್ಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಈ ವೇಳೆ ಬಿಜೆಪಿ ನಾಮನಿರ್ದೇಶಿತ ಸದಸ್ಯ ಬಾಬು ಬಂಗೇರ ಮಾತನಾಡಿ, ಜೆಡಿಎಸ್ ನವರು ಬಜೆಟ್ ಬಗ್ಗೆ ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ನಾವು ಬಜೆಟ್ ವಿಚಾರದಲ್ಲಿ ತಟಸ್ಥ ಎಂದಾಕ್ಷಣ ಸಭೆಯ ವೇದಿಕೆಯಲ್ಲಿದ್ದ ನಗರಸಭೆ ಉಪಾಧ್ಯಕ್ಷ ಆಯುಬ್ ಮಂಚಿಲ ಟೇಬಲನ್ನ ಬಡಿದು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್ ಹಿರಿಯ ಸದಸ್ಯ ದಿನಕರ್ ಉಳ್ಳಾಲ್ ವಿರೋಧ ಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷ ಕಾಂಗ್ರೆಸ್ ಹೊಂದಾಣಿಕೆಯ ರಾಜಕೀಯ ನಡೆಸುತ್ತಿದ್ದು ನೀವಿಬ್ಬರೂ ಒಂದೇ ನಾಣ್ಯದ ಎರಡು ಮುಖಗಳೆಂದು ಆಕ್ಷೇಪಿಸಿದ್ದಾರೆ. ಮತ್ತೆ ಸದನದಲ್ಲಿ ಆಡಳಿತ ವಿರೋಧ ಪಕ್ಷಗಳ ನಡುವೆ ಗದ್ದಲ ಎಬ್ಬಿದ್ದು ಸಭಾದ್ಯಕ್ಷತೆ ವಹಿಸಿದ್ದ ನಗರ ಸಭೆ ಅಧ್ಯಕ್ಷೆ ಚಿತ್ರಕಲಾ ಅವರು ಗದ್ದಲ, ಗಲಾಟೆ ಮಧ್ಯೆಯೇ ರಾಷ್ಟ್ರಗೀತೆ ಹಾಡುವುದರೊಂದಿಗೆ ಸಭೆಯನ್ನ ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.



ಎಸ್ ಡಿಪಿಐ ಸದಸ್ಯ ಅಝ್ಗರ್ ಆಲಿ ನಗರಸಭೆ ಪ್ರಬಂಧಕರಲ್ಲಿ ಅಜೆಂಡಾದಲ್ಲಿ ಸಭೆ ಸಂಪೂರ್ಣಗೊಂಡಿಲ್ಲವೆಂದು ದಾಖಲಿಸಲು ಸೂಚಿಸಿದ್ದಾರೆ. ಈ ವೇಳೆ ಮಧ್ಯೆ ಪ್ರವೇಶಿಸಿದ ಕಾಂಗ್ರೆಸ್ ನಗರ ಸದಸ್ಯರಾದ ಭಾರತಿ ಮತ್ತು ವೀಣಾ ಶಾಂತಿ ಡಿಸೋಜ ಪ್ರಬಂಧಕರಲ್ಲಿ ಅಝ್ಗರ್ ವಿರುದ್ಧ ಪೊಲೀಸ್ ದೂರು ನೀಡುವಂತೆ ಹೇಳಿದ್ದು ಇದರಿಂದ ಕೆರಳಿದ ಅಝ್ಗರ್ ಕೈ ಸದಸ್ಯೆಯರ ವಿರುದ್ಧ ಗಲಾಟೆ ನಡೆಸಿದ್ದು ಮಾತಿನ ಚಕಮಕಿ, ತಳ್ಳಾಟ ನಡೆಸಿದ್ದಾರೆ.
Mangalore JDS leaders with flowers on ear during Ullal municipality Budget, slam Congress leaders by pushing and fighting.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm