ಬ್ರೇಕಿಂಗ್ ನ್ಯೂಸ್
            
                        21-02-23 10:06 pm Mangalore Correspondent ಕರಾವಳಿ
            ಮಂಗಳೂರು, ಫೆ.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಹೊರತುಪಡಿಸಿ ಉಳಿದ ಏಳು ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬಿಲ್ಲವರ ಮತಗಳೇ ನಿರ್ಣಾಯಕ. ಹಾಗಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ ಮೂರು ಸೀಟುಗಳನ್ನು ಬಿಲ್ಲವರಿಗೆ ನೀಡಬೇಕೆಂದು ಕಾಂಗ್ರೆಸ್ ಮುಖಂಡರ ಬಳಿಗೆ ನಿಯೋಗ ಹೋಗಿದ್ದೇವೆ. ಮೂರು ಸೀಟು ನೀಡಬೇಕೆಂದು ನಾವು ಮಾಧ್ಯಮದ ಮೂಲಕ ಒತ್ತಾಯ ಮಾಡುತ್ತೇವೆ ಎಂದು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಬಿಲ್ಲವ ಮುಖಂಡರು ಒತ್ತಾಯಿಸಿದ್ದಾರೆ.
ಗೆಜ್ಜೆಗಿರಿ ಕ್ಷೇತ್ರ ಸಮಿತಿಯಲ್ಲಿ ಗುರುತಿಸಿರುವ ಉಲ್ಲಾಸ್ ಕೋಟ್ಯಾನ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಬಿಲ್ಲವರಿಗೆ ಸೀಟು ಕೊಡಬೇಕೆಂದು ಒತ್ತಾಯ ಮಾಡುತ್ತೇವೆ. ಈಗಾಗಲೇ ಈ ಬಗ್ಗೆ ನಾವು ನಿಯೋಗ ತೆರಳಿ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಮನವರಿಕೆ ಮಾಡಿದ್ದೇವೆ. ಪಕ್ಷದಲ್ಲಿ ಗುರುತಿಸಿರುವ ನಮ್ಮ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಇದೆ. ನಮ್ಮ ಸಮುದಾಯದ ನಾಯಕರಿಗೆ ಟಿಕೆಟ್ ನೀಡಿದಲ್ಲಿ ಅವರನ್ನು ಗೆಲ್ಲಿಸಲು ಶಕ್ತಿ ಮೀರಿದ ಪ್ರಯತ್ನವನ್ನು ಸಮುದಾಯದ ವತಿಯಿಂದ ಮಾಡುತ್ತೇವೆ ಎಂದು ಹೇಳಿದರು.
ಈ ಹಿಂದೆ ಜನಾರ್ದನ ಪೂಜಾರಿಯವರಿಗೆ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು. ಬಿಲ್ಲವರನ್ನು ಪ್ರತಿನಿಧಿಸುವ ಜನಾರ್ದನ ಪೂಜಾರಿ ಇದ್ದರು. ಕಳೆದ ಬಾರಿ ಅದನ್ನು ಬೇರೆಯವರಿಗೆ ನೀಡಲಾಗಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಬ್ಬರಿಗೆ ಮಾತ್ರ ಬಿಲ್ಲವರಿಗೆ ಅವಕಾಶ ನೀಡಲಾಗಿತ್ತು. ಹಾಗಾಗಿ ಈ ಬಾರಿ ಚುನಾವಣೆಗೆ ಮೊದಲೇ ಆಗ್ರಹ ಮಾಡುತ್ತಿದ್ದೇವೆ ಎಂದು ಹೇಳಿದರು.

ನೀವು ಕಾಂಗ್ರೆಸ್ ಮೇಲೆ ಮಾತ್ರ ಒತ್ತಾಯ ಮಾಡುತ್ತೀರಿ ಯಾಕೆ, ಬಿಜೆಪಿ ಮೇಲೆ ಮಾಡಲ್ವಾ ಎಂದು ಕೇಳಿದ್ದಕ್ಕೆ, ನಾವು ಈಗಾಗಲೇ ಕಾಂಗ್ರೆಸ್ ನಾಯಕರಿಗೆ ಮನವಿ ನೀಡಿದ್ದೇವೆ. ನಾವು ಕಾಂಗ್ರೆಸ್ ಪಕ್ಷದಲ್ಲಿ ಪದಾಧಿಕಾರಿ ಆಗಿರುವುದರಿಂದ ಬಿಜೆಪಿ ಬಗ್ಗೆ ಮಾತನಾಡುವುದಿಲ್ಲ. ಅವರು ಕೊಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಕೊಡಬೇಕು ಎಂದು ಆಗ್ರಹ ಮಾಡುತ್ತೇವೆ. ಇಂಥ ಕ್ಷೇತ್ರ ಎಂಬುದನ್ನೂ ಹೇಳುವುದಿಲ್ಲ. ಯಾವುದಾದ್ರೂ ಮೂರು ಕ್ಷೇತ್ರದಲ್ಲಿ ಸೀಟು ಕೊಡಬೇಕೆಂದು ಹೇಳುತ್ತೇವೆ ಎಂದರು. ಸೀಟು ಕೊಡದೇ ಇದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ, ನಾವು ಈ ಬಗ್ಗೆ ಮಾಧ್ಯಮದಲ್ಲಿ ಹೇಳಲು ಆಗುವುದಿಲ್ಲ ಎಂದರು. 
ಧನಂಜಯ ಮಟ್ಟು ಮೂಲ್ಕಿ, ಯೋಗೀಶ್ ಕುಮಾರ್ ಬೆಳ್ತಂಗಡಿ, ಗಣೇಶ್ ಪೂಜಾರಿ ಗುರುಪುರ ಇದ್ದರು.
            
            
            Three seats must be given to the Billava community in Mangalore for the coming election requests Congress Billava leaders.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm