ಬ್ರೇಕಿಂಗ್ ನ್ಯೂಸ್
23-02-23 03:28 pm Mangalore Correspondent ಕರಾವಳಿ
ಮಂಗಳೂರು, ಫೆ.23 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಹಂತಕರಿಗೆ ತರಬೇತಿ ನೀಡಲಾಗಿತ್ತು ಎನ್ನಲಾದ ವಿಟ್ಲ ಬಳಿಯ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಮತ್ತು ಅಲ್ಲಿನ 20 ಸೆಂಟ್ ಆಸ್ತಿಯನ್ನು ಎನ್ಐಎ ವಶಕ್ಕೆ ಪಡೆದಿದೆ.
ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿರುವ ಮಿತ್ತೂರು ಫ್ರೀಡಂ ಎಜುಕೇಶನ್ ಎಂಡ್ ಚಾರಿಟೇಬಲ್ ಟ್ರಸ್ಟ್ ಅಡಿ ಕಾರ್ಯ ನಿರ್ವಹಿಸುತ್ತಿದ್ದ ಫ್ರೀಡಂ ಕಮ್ಯನಿಟಿ ಹಾಲ್ ಕಟ್ಟಡ ಮತ್ತು 20 ಸೆಂಟ್ ಜಾಗದ ಸುತ್ತಳತೆಯ ಸಂಪೂರ್ಣ ಆಸ್ತಿಯನ್ನು ಎನ್ಐಎ ಅಧಿಕಾರಿಗಳು ಯುಎಪಿಎ ಕಾಯ್ದೆಯಡಿ ತಮ್ಮ ವಶಕ್ಕೆ ಪಡೆದು ಆದೇಶ ಮಾಡಿದ್ದಾರೆ. ಅದರಂತೆ, ಈ ಜಾಗವನ್ನು ಯಾವುದೇ ಕಾರಣಕ್ಕೂ ಇತರರಿಗೆ ಪರಭಾರೆ ಮಾಡುವಂತಿಲ್ಲ. ಬಾಡಿಗೆ, ಲೀಜ್ ಕೊಡುವಂತಿಲ್ಲ. ಖಾಸಗಿಯಾಗಿ ಬಳಕೆ ಮಾಡುವಂತಿಲ್ಲ. ಅಲ್ಲಿರುವ ಯಾವುದೇ ಸೊತ್ತು, ಆಸ್ತಿಯನ್ನು ಬೇರೆ ಕಡೆ ಸಾಗಿಸುವಂತಿಲ್ಲ.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಬೆಂಗಳೂರು ಎನ್ಐಎ ಘಟಕದ ಎಸ್ಪಿ ಶಣ್ಮುಗಂ ಈ ಬಗ್ಗೆ ಆದೇಶ ಮಾಡಿದ್ದಾರೆ. ಇದಲ್ಲದೆ, ಕೇಂದ್ರ ಗೃಹ ಸಚಿವಾಲಯದಡಿ ಇರುವ ರಾಷ್ಟ್ರೀಯ ತನಿಖಾ ದಳದ ಅಧೀನಕ್ಕೆ ಪಡೆದು, ಫ್ರೀಡಂ ಕಮ್ಯುನಿಟಿ ಹಾಲ್ ಸೆಂಟರಿನ ಕಾರ್ಯದರ್ಶಿಯಿಂದ ಸಹಿಯನ್ನೂ ಪಡೆದಿದ್ದಾರೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ವಿಟ್ಲ ಠಾಣಾಧಿಕಾರಿಗೆ ಆದೇಶ ಪ್ರತಿ ರವಾನೆ ಮಾಡಲಾಗಿದೆ. ಪ್ರವೀಣ್ ಹತ್ಯೆ ಭಯೋತ್ಪಾದಕ ಕೃತ್ಯ, ಸಮಾಜದಲ್ಲಿ ಭೀತಿ ಮೂಡಿಸಲು ಮಾಡಿದ್ದ ಕೃತ್ಯ ಎಂದು ಎನ್ಐಎ ಚಾರ್ಜ್ ಶೀಟ್ ನಲ್ಲಿ ಹಾಕಲಾಗಿತ್ತು.
ಅಲ್ಲದೆ, ಪಿಎಫ್ಐ ಸಂಘಟನೆಯ ಅಸಾಲ್ಟ್ ಟೀಮ್ ಅಂದರೆ, ಹಂತಕರ ತಂಡದ ಸದಸ್ಯರ ತರಬೇತಿಗೆ ಫ್ರೀಡಂ ಕಮ್ಯುನಿಟಿ ಸಭಾಂಗಣವನ್ನು ಬಳಸುತ್ತಿದ್ದರು ಎಂದು ಉಲ್ಲೇಖ ಮಾಡಲಾಗಿತ್ತು. ಕಳೆದ ಸೆಪ್ಟೆಂಬರ್ 27ರಂದು ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ಬಳಿಕ ಈ ಹಾಲ್ ಕಟ್ಟಡವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಜಪ್ತಿ ಮಾಡಿ ಸೀಲ್ ಹಾಕಿತ್ತು. ಇದೀಗ ಅಲ್ಲಿನ ಆಸ್ತಿಯನ್ನು ಯಾವುದೇ ವ್ಯಕ್ತಿ ಬಳಸುವಂತಿಲ್ಲ ಮತ್ತು ದೇಶದ್ರೋಹದ ಕಾಯ್ದೆಯಡಿ ಅಲ್ಲಿನ ಆಸ್ತಿಯನ್ನೂ ವಶಕ್ಕೆ ಪಡೆದು ಎನ್ಐಎ ತನ್ನ ಅಧೀನಕ್ಕೆ ತೆಗೆದುಕೊಂಡಿದೆ.
Praveen nettaru murder case, NIA Seize PFI community hall at vitla in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm