ಬ್ರೇಕಿಂಗ್ ನ್ಯೂಸ್
26-02-23 09:38 pm Mangalore Correspondent ಕರಾವಳಿ
ಮಂಗಳೂರು, ಫೆ.26: ನಗರದ ಕೆಪಿಟಿ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಭಾನುವಾರ ಸಂಜೆ ವೇಳೆಗೆ ಒಂದು ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕೆಪಿಟಿ ಸರ್ಕಲ್ ಕಡೆಯಿಂದ ಕೊಟ್ಟಾರ ಕಡೆಗೆ ತೆರಳುವ ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಬಳಿ ಕಾರೊಂದು ಯು ಟರ್ನ್ ತೆಗೆಯಲು ದಿಢೀರ್ ಆಗಿ ಟರ್ನ್ ತೆಗೆದುಕೊಂಡಿದ್ದು, ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಮೀನಿನ ಪಿಕಪ್ ವಾಹನ ಡಿಕ್ಕಿಯಾಗಿದೆ. ಇದೇ ವೇಳೆ, ಅದರ ಹಿಂದಿನಿಂದ ಬರುತ್ತಿದ್ದ ಹಾಲಿನ ವಾಹನ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಹಾಲಿನ ವಾಹನ ಪಿಕಪ್ ವಾಹನದ ಹಿಂಭಾಗಕ್ಕೆ ನುಗ್ಗಿದ್ದು, ಅದರ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಚಾಲಕನನ್ನು ಹೊರಗೆ ತೆಗೆದು, ಎರಡು ವಾಹನಗಳನ್ನು ಬೇರ್ಪಡಿಸಲು 45 ನಿಮಿಷ ತಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, 8.30ರ ವೇಳೆಗೆ ವಾಹನಗಳನ್ನು ಕ್ರೇನ್ ಮೂಲಕ ತೆರವು ಮಾಡಲಾಯ್ತು. ಒಂದು ಬದಿಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸ್ವಲ್ಪ ಹೊತ್ತು ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಆಗಿತ್ತು. ಗಾಯಾಳು ವ್ಯಕ್ತಿ ಕಾಲಿಗೆ ಗಂಭೀರ ಗಾಯಗೊಂಡಿದ್ದಾರೆ.
ಕೆಪಿಟಿ ಬಳಿಯ ಈ ಯು ಟರ್ನ್ ಆಗುವ ಜಾಗದಲ್ಲಿ ಹಿಂದೆಯೂ ಅಪಘಾತ ಆಗಿತ್ತು. ವಾಹನಗಳು ಸರ್ಕಲ್ ಕಡೆಯಿಂದ ವೇಗವಾಗಿ ಸಾಗುತ್ತಾ ಬಂದು, ಅಲ್ಲಿ ಯು ಟರ್ನ್ ತೆಗೆಯುವ ವೇಳೆಗೆ ಹಿಂದಿನಿಂದ ಬಂದು ಡಿಕ್ಕಿಯಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಸವಾರರು ನಿಯಂತ್ರಣ ತಪ್ಪಿದರೆ ಅಥವಾ ಸಿಗ್ನಲ್ ಹಾಕದೆ ಟರ್ನ್ ಮಾಡಲು ಹೋದರೆ ಅಪಾಯಗಳಾಗುವುದು ಮಾಮೂಲಿ ಅನ್ನುವಂತಾಗಿದೆ.
Mangalore car Pickup tempo accident near kPT, heavy traffic block at nantoor
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm