ಬ್ರೇಕಿಂಗ್ ನ್ಯೂಸ್
26-02-23 09:38 pm Mangalore Correspondent ಕರಾವಳಿ
ಮಂಗಳೂರು, ಫೆ.26: ನಗರದ ಕೆಪಿಟಿ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಭಾನುವಾರ ಸಂಜೆ ವೇಳೆಗೆ ಒಂದು ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕೆಪಿಟಿ ಸರ್ಕಲ್ ಕಡೆಯಿಂದ ಕೊಟ್ಟಾರ ಕಡೆಗೆ ತೆರಳುವ ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಬಳಿ ಕಾರೊಂದು ಯು ಟರ್ನ್ ತೆಗೆಯಲು ದಿಢೀರ್ ಆಗಿ ಟರ್ನ್ ತೆಗೆದುಕೊಂಡಿದ್ದು, ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಮೀನಿನ ಪಿಕಪ್ ವಾಹನ ಡಿಕ್ಕಿಯಾಗಿದೆ. ಇದೇ ವೇಳೆ, ಅದರ ಹಿಂದಿನಿಂದ ಬರುತ್ತಿದ್ದ ಹಾಲಿನ ವಾಹನ ಡಿಕ್ಕಿಯಾಗಿದೆ.


ಡಿಕ್ಕಿಯ ರಭಸಕ್ಕೆ ಹಾಲಿನ ವಾಹನ ಪಿಕಪ್ ವಾಹನದ ಹಿಂಭಾಗಕ್ಕೆ ನುಗ್ಗಿದ್ದು, ಅದರ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಚಾಲಕನನ್ನು ಹೊರಗೆ ತೆಗೆದು, ಎರಡು ವಾಹನಗಳನ್ನು ಬೇರ್ಪಡಿಸಲು 45 ನಿಮಿಷ ತಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, 8.30ರ ವೇಳೆಗೆ ವಾಹನಗಳನ್ನು ಕ್ರೇನ್ ಮೂಲಕ ತೆರವು ಮಾಡಲಾಯ್ತು. ಒಂದು ಬದಿಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸ್ವಲ್ಪ ಹೊತ್ತು ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಆಗಿತ್ತು. ಗಾಯಾಳು ವ್ಯಕ್ತಿ ಕಾಲಿಗೆ ಗಂಭೀರ ಗಾಯಗೊಂಡಿದ್ದಾರೆ.

ಕೆಪಿಟಿ ಬಳಿಯ ಈ ಯು ಟರ್ನ್ ಆಗುವ ಜಾಗದಲ್ಲಿ ಹಿಂದೆಯೂ ಅಪಘಾತ ಆಗಿತ್ತು. ವಾಹನಗಳು ಸರ್ಕಲ್ ಕಡೆಯಿಂದ ವೇಗವಾಗಿ ಸಾಗುತ್ತಾ ಬಂದು, ಅಲ್ಲಿ ಯು ಟರ್ನ್ ತೆಗೆಯುವ ವೇಳೆಗೆ ಹಿಂದಿನಿಂದ ಬಂದು ಡಿಕ್ಕಿಯಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಸವಾರರು ನಿಯಂತ್ರಣ ತಪ್ಪಿದರೆ ಅಥವಾ ಸಿಗ್ನಲ್ ಹಾಕದೆ ಟರ್ನ್ ಮಾಡಲು ಹೋದರೆ ಅಪಾಯಗಳಾಗುವುದು ಮಾಮೂಲಿ ಅನ್ನುವಂತಾಗಿದೆ.
Mangalore car Pickup tempo accident near kPT, heavy traffic block at nantoor
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm