ಬ್ರೇಕಿಂಗ್ ನ್ಯೂಸ್
01-03-23 07:21 pm Mangalore Correspondent ಕರಾವಳಿ
ಮಂಗಳೂರು, ಮಾ.1 : ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕೊಡಿಯಾಲ್ ಬೈಲ್ ಬಳಿ ನಡೆದಿದ್ದು, ಮಹಿಳೆ ಹಾಗೂ 4 ವರ್ಷದ ಬಾಲಕಿ ಸಾವನಪ್ಪಿದ್ದರೆ, ಮತ್ತೋರ್ವ ಬಾಲಕಿ ಪವಾಡ ಸದೃಶ್ಯ ಸಾವಿನ ದವಡೆಯಿಂದ ಪಾರಾಗಿದ್ದಾಳೆ.
ಮೃತ ಮಹಿಳೆಯನ್ನು 33 ವರ್ಷದ ವಿಜಯಾ, 4 ವರ್ಷದ ಶೋಭಿತಾ ಎಂದು ಗುರುತಿಸಲಾಗಿದೆ. 12 ವರ್ಷದ ಇನ್ನೊಬ್ಬ ಮಗಳು ಯಜ್ಞಾ ಬದುಕಿ ಉಳಿದಿದ್ದಾಳೆ. ವಿಜಯಾ ಅವರ ಮೊದಲ ಪತಿ ಸುರೇಂದ್ರ 6 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಬಳಿಕ ವಿಜಯಾ 2ನೇ ಮದುವೆಯಾಗಿದ್ದು 20 ದಿನಗಳ ಹಿಂದೆ 2ನೇ ಪತಿ ಉಮೇಶ್ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇದರಿಂದ ತೀವ್ರ ನೊಂದಿದ್ದ ವಿಜಯಾ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದು ಇಬ್ಬರು ಮಕ್ಕಳಿಗೂ ನೇಣು ಕುಣಿಕೆ ಹಾಕಿ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ. ಆದರೆ ಅದೃಷ್ಟವಶಾತ್ 12 ವರ್ಷದ ಯಜ್ಞಾ ಕಾಲ ಬುಡದಲ್ಲಿದ್ದ ಟೀಫಾಯಿ ಆಕೆಯನ್ನು ಬದುಕಿಸಿದೆ. ನೇಣು ಕುಣಿಕೆಯಲ್ಲಿದ್ದರೂ ಜೀವ ರಕ್ಷಣೆಗಾಗಿ ಕೂಗಿದ್ದಾಳೆ. ಮನೆಯ ಮೇಲಿನ ಮಹಡಿಯಲ್ಲಿ ಬಾಡಿಗೆ ಇದ್ದವರು ಮಗುವಿನ ಚೀರಾಟ ಕೇಳಿ ಕೆಳಗೆ ಓಡಿ ಬಂದಿದ್ದು ನೋಡಿದಾಗ ತಾಯಿ ವಿಜಯಾ ಮತ್ತು 4 ವರ್ಷದ ಮಗು ಪ್ರಾಣ ಬಿಟ್ಟಿದ್ದರು. ಯಜ್ಞಾಳನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಿದ್ದಾರೆ.
Mangalore Mother commits suicide with her four year old daughter at Kodial Guthu. The deceased have been identified as Vijaya (33) and her daughter Shobita (4). Another daughter is said to be out of danger. Barke police have registered the case. She had lost her first husband six years ago and recently she lost her second Husband too.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm