ಬ್ರೇಕಿಂಗ್ ನ್ಯೂಸ್
01-03-23 09:29 pm Mangalore Correspondent ಕರಾವಳಿ
ಮಂಗಳೂರು, ಮಾ.1 : ಹಣಕ್ಕಾಗಿ ವೃದ್ಧರೊಬ್ಬರನ್ನು ಯುವಕರು ಸೇರಿ ಇರಾ ಬಳಿಯ ನಿರ್ಜನ ಪ್ರದೇಶದಲ್ಲಿ ಹತ್ಯೆಗೈದು ಹೂತಿಟ್ಟ ಪ್ರಕರಣದಲ್ಲಿ ಐವರು ಆರೋಪಿಗಳ ಅಪರಾಧ ನ್ಯಾಯಾಲಯದಲ್ಲಿ ಸಾಬೀತಾಗಿದೆ, ಎಲ್ಲ 5 ಮಂದಿಯೂ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಈ ಬಗ್ಗೆ ತೀರ್ಪು ನೀಡಿರುವ ನ್ಯಾಯಾಧೀಶ ಬಸಪ್ಪ ಬಾಳಪ್ಪ ಜಕಾತಿ, ಶಿಕ್ಷೆ ಪ್ರಮಾಣವನ್ನು ಮಾರ್ಚ್ 3ನೇ ತಾರೀಕಿಗೆ ಕಾಯ್ದಿರಿಸಿದ್ದಾರೆ. ತೊಕ್ಕೊಟ್ಟು ಬಳಿಯ ಮಲಾರ್ ಗ್ರಾಮದ ಪಲ್ಲಿಯಬ್ಬ ಎಂಬ ವ್ಯಕ್ತಿಯನ್ನು ಹಣಕ್ಕಾಗಿ ಕತ್ತು ಹಿಸುಕಿ ಕೊಲ್ಲಲಾಗಿತ್ತು. ವ್ಯಕ್ತಿ ಕಾಣೆಯಾದ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿದ್ದರು. ಪೋಲೀಸರು ತನಿಖೆ ನಡೆಸಿದಾಗ ಕೊಲೆ ಎಂದು ಸಾಬೀತಾಗಿತ್ತು. ಮಲಾರ್ ಅಕ್ಷರ ನಗರ ನಿವಾಸಿ ಹಂಝ ಅಬ್ಬಾಸ್ (44), ಮಲಾರ್ ಅರಸ್ತಾನ ಸೈಟ್ ನಿವಾಸಿ ಅಝರುದ್ದೀನ್ (27), ಸಜಿಪನಡು ಕಂಚಿನಡ್ಕಪದವು ನಿವಾಸಿಗಳಾದ ಅಮೀರ್ ಶೇಖ್ ಯಾನೆ ಅಮ್ಮಿ (26), ಅರ್ಫಾಝ್ ಅಬ್ದುಲ್ ರಝಾಕ್ (20) ಹಾಗೂ ಅಥಾವುಲ್ಲ ಯಾನೆ ಅಲ್ತಾಫ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಪಾವೂರು ಗ್ರಾಮದ ಮಲಾರ್ನಿಂದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ ನಾಪತ್ತೆಯಾದ ಬಗ್ಗೆ 2020ರ ಅ.29ರಂದು ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಪಲ್ಲಿಯಬ್ಬ ಎಂಬವರ ಮೃತದೇಹವು ಇರಾ ಗ್ರಾಮದ ಪದವು ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಣದ ವಿಚಾರದಲ್ಲಿ ಇವರನ್ನು ಹತ್ಯೆಗೈದು ಹೂತು ಹಾಕಲಾಗಿತ್ತು ಎಂದು ಕೊಣಾಜೆ ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು. ಎರಡೇ ವರ್ಷದಲ್ಲಿ ವಿಚಾರಣೆ ಪೂರ್ತಿಗೊಳಿಸಿದ ನ್ಯಾಯಾಲಯ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ.
Mangalore 70-year-old Palliabba Murder Case, court finds all the five accused guilty . The body of a 70-year-old man had gone missing from Malar and was found buried in Ira. The deceased was Palliabba alias Palliyaka (70) a resident of Arastan, Malar.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm