ಬ್ರೇಕಿಂಗ್ ನ್ಯೂಸ್
02-03-23 07:05 pm Mangalore Correspondent ಕರಾವಳಿ
ಉಳ್ಳಾಲ, ಮಾ.2 : ಶಾಸಕ ಖಾದರ್ ಅವರು ತುದಿ ಬೆರಳಲ್ಲಿ ಆಡಿಸುತ್ತಿರುವ ಉಳ್ಳಾಲ ನಗರಸಭೆಯ ಗೋಡೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಉಳ್ಳಾಲವನ್ನ ನಂ.1 ಮಾಡಲು ರಿಯಾಝ್ ಫರಂಗಿಪೇಟೆಯನ್ನ ಅಖಾಡಕ್ಕೆ ಇಳಿಸಿದ್ದೇವೆ ಎಂದು ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಸವಾಲೆಸೆದಿದ್ದಾರೆ.
ಉಳ್ಳಾಲ ನಗರಸಭೆಯ ಭ್ರಷ್ಟಾಚಾರದ ವಿರುದ್ಧ ಮತ್ತು ಮೂಲಭೂತ ಸೌಕರ್ಯ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ನಗರ ಸಮಿತಿ ವತಿಯಿಂದ ಉಳ್ಳಾಲ ನಗರಸಭೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಆಡಳಿತವುಳ್ಳ ಉಳ್ಳಾಲ ನಗರಸಭೆ ಜನರಿಗೆ ಬೇಕಾದ ಮೂಲಭೂತ ಸವಲತ್ತುಗಳನ್ನ ಒದಗಿಸಿಲ್ಲ. ಮಾತ್ರವಲ್ಲದೆ ಜನರ ಸಮಸ್ಯೆಗಳಿಗೆ ಸ್ಪಂದಿಸಲೂ ಸಂಪೂರ್ಣ ವಿಫಲವಾಗಿದೆ. ಬಹುಮಹಡಿ ಕಟ್ಟಡಗಳು, ಬಾಡಿಗೆ ಅಂಗಡಿಗಳ ಆದಾಯದಲ್ಲಿ ನಗರಸಭೆ ಭ್ರಷ್ಟಾಚಾರ ನಡೆಸುತ್ತಲೇ ಬಂದಿದೆ. ಆದರೆ ಬಡಜನರ ಬೇಡಿಕೆಯ ಒಂದು ದಾರಿ ದೀಪ ಕಲ್ಪಿಸಲು ನಗರಸಭೆಗೆ ಸಾಧ್ಯವಾಗಿಲ್ಲ. ಎಸ್ ಡಿಪಿಐ ಮನಸು ಮಾಡಿದರೆ ನಿಮ್ಮನ್ನ ಅಧಿಕಾರದಿಂದ ಕಿತ್ತೆಸಯಲು ಸಾಧ್ಯವಿದೆ. ಉಳ್ಳಾಲ ವಿಧಾನಸಭಾ ಕ್ಷೇತ್ರದ ಸ್ಥಳೀಯಾಡಳಿತಗಳಿಗೆ ನಡೆದ ಚುನಾವಣೆಗಳ ಫಲಿತಾಂಶಗಳಲ್ಲಿ ನಮ್ಮ ಪಕ್ಷ ಗಳಿಸಿದ ಸ್ಥಾನಗಳನ್ನ ಗಮನಿಸಿ. ಕ್ಷೇತ್ರದ ಶಾಸಕ ಖಾದರ್ ಅವರು ಎಸ್ ಡಿಪಿಐ ಮತ್ತು ಜೆಡಿಎಸ್ ನಗರಸಭಾ ಸದಸ್ಯರನ್ನ ಕಡೆಗಣಿಸಿ ಕೇವಲ ತನ್ನ ಪಕ್ಷದ ಸದಸ್ಯರಿಗೆ ಅನುದಾನ ನೀಡಿ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆ. ಹೀಗೆ ಮುಂದುವರಿದರೆ ಶಾಸಕರ ಮನೆ ಮುಂದೆ ಎಸ್ ಡಿಪಿಐ ಉಗ್ರ ಪ್ರತಿಭಟನೆ ನಡೆಸೋದಾಗಿ ಎಚ್ಚರಿಕೆ ನೀಡಿದರು. ಅಲ್ಲದೆ ಈ ಬಾರಿ ಎಸ್ ಡಿಪಿಐ ಪಕ್ಷವು ರಿಯಾಝ್ ಫರಂಗಿಪೇಟೆ ಅವರನ್ನ ಉಳ್ಳಾಲದಲ್ಲಿ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಯನ್ನಾಗಿ ಅಖಾಡಕ್ಕಿಳಿಸಿದ್ದು ಅವರು ಉಳ್ಳಾಲವನ್ನ ನಂ.1 ಮಾಡೇ ಮಾಡುತ್ತಾರೆ ಎಂದರು.
ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ಅಧ್ಯಕ್ಷ ಎ.ಆರ್ ಅಬ್ಬಾಸ್, ಉಪಾಧ್ಯಕ್ಷ ಇಮ್ತಿಯಾಝ್ ಕೋಟೆಪುರ, ಕ್ಷೇತ್ರ ಸಮಿತಿ ಸದಸ್ಯ ಶೋಯೆಬ್ ಉಳ್ಳಾಲ್, ಮುಸ್ಲಿಂ ಒಕ್ಕೂಟ ಅಧ್ಯಕ್ಷ ಇಸ್ಮಾಯಿಲ್, ನಗರಸಭೆ ಸದಸ್ಯರಾದ ಝರೀನಾ ಬಾನು, ಖಮರುನ್ನೀಸಾ ನಿಝಾಮ್, ರಮೀಝ್, ಅಝ್ಗರ್, ಶೈನಾಝ್ ಅಕ್ರಮ್, ರುಖ್ಯ ಇಕ್ಬಾಲ್ ಮೊದಲಾದವರು ಉಪಸ್ಥಿತರಿದ್ದರು.
Mangalore SDPI members protest warns Mla UT Khader as Riyaz farangipete to contest from ullal.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm