ಬ್ರೇಕಿಂಗ್ ನ್ಯೂಸ್
            
                        02-03-23 07:05 pm Mangalore Correspondent ಕರಾವಳಿ
            ಉಳ್ಳಾಲ, ಮಾ.2 : ಶಾಸಕ ಖಾದರ್ ಅವರು ತುದಿ ಬೆರಳಲ್ಲಿ ಆಡಿಸುತ್ತಿರುವ ಉಳ್ಳಾಲ ನಗರಸಭೆಯ ಗೋಡೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಉಳ್ಳಾಲವನ್ನ ನಂ.1 ಮಾಡಲು ರಿಯಾಝ್ ಫರಂಗಿಪೇಟೆಯನ್ನ ಅಖಾಡಕ್ಕೆ ಇಳಿಸಿದ್ದೇವೆ ಎಂದು ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಸವಾಲೆಸೆದಿದ್ದಾರೆ.
ಉಳ್ಳಾಲ ನಗರಸಭೆಯ ಭ್ರಷ್ಟಾಚಾರದ ವಿರುದ್ಧ ಮತ್ತು ಮೂಲಭೂತ ಸೌಕರ್ಯ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ನಗರ ಸಮಿತಿ ವತಿಯಿಂದ ಉಳ್ಳಾಲ ನಗರಸಭೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಆಡಳಿತವುಳ್ಳ ಉಳ್ಳಾಲ ನಗರಸಭೆ ಜನರಿಗೆ ಬೇಕಾದ ಮೂಲಭೂತ ಸವಲತ್ತುಗಳನ್ನ ಒದಗಿಸಿಲ್ಲ. ಮಾತ್ರವಲ್ಲದೆ ಜನರ ಸಮಸ್ಯೆಗಳಿಗೆ ಸ್ಪಂದಿಸಲೂ ಸಂಪೂರ್ಣ ವಿಫಲವಾಗಿದೆ. ಬಹುಮಹಡಿ ಕಟ್ಟಡಗಳು, ಬಾಡಿಗೆ ಅಂಗಡಿಗಳ ಆದಾಯದಲ್ಲಿ ನಗರಸಭೆ ಭ್ರಷ್ಟಾಚಾರ ನಡೆಸುತ್ತಲೇ ಬಂದಿದೆ. ಆದರೆ ಬಡಜನರ ಬೇಡಿಕೆಯ ಒಂದು ದಾರಿ ದೀಪ ಕಲ್ಪಿಸಲು ನಗರಸಭೆಗೆ ಸಾಧ್ಯವಾಗಿಲ್ಲ. ಎಸ್ ಡಿಪಿಐ ಮನಸು ಮಾಡಿದರೆ ನಿಮ್ಮನ್ನ ಅಧಿಕಾರದಿಂದ ಕಿತ್ತೆಸಯಲು ಸಾಧ್ಯವಿದೆ. ಉಳ್ಳಾಲ ವಿಧಾನಸಭಾ ಕ್ಷೇತ್ರದ ಸ್ಥಳೀಯಾಡಳಿತಗಳಿಗೆ ನಡೆದ ಚುನಾವಣೆಗಳ ಫಲಿತಾಂಶಗಳಲ್ಲಿ ನಮ್ಮ ಪಕ್ಷ ಗಳಿಸಿದ ಸ್ಥಾನಗಳನ್ನ ಗಮನಿಸಿ. ಕ್ಷೇತ್ರದ ಶಾಸಕ ಖಾದರ್ ಅವರು ಎಸ್ ಡಿಪಿಐ ಮತ್ತು ಜೆಡಿಎಸ್ ನಗರಸಭಾ ಸದಸ್ಯರನ್ನ ಕಡೆಗಣಿಸಿ ಕೇವಲ ತನ್ನ ಪಕ್ಷದ ಸದಸ್ಯರಿಗೆ ಅನುದಾನ ನೀಡಿ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆ. ಹೀಗೆ ಮುಂದುವರಿದರೆ ಶಾಸಕರ ಮನೆ ಮುಂದೆ ಎಸ್ ಡಿಪಿಐ ಉಗ್ರ ಪ್ರತಿಭಟನೆ ನಡೆಸೋದಾಗಿ ಎಚ್ಚರಿಕೆ ನೀಡಿದರು. ಅಲ್ಲದೆ ಈ ಬಾರಿ ಎಸ್ ಡಿಪಿಐ ಪಕ್ಷವು ರಿಯಾಝ್ ಫರಂಗಿಪೇಟೆ ಅವರನ್ನ ಉಳ್ಳಾಲದಲ್ಲಿ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಯನ್ನಾಗಿ ಅಖಾಡಕ್ಕಿಳಿಸಿದ್ದು ಅವರು ಉಳ್ಳಾಲವನ್ನ ನಂ.1 ಮಾಡೇ ಮಾಡುತ್ತಾರೆ ಎಂದರು.
ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ಅಧ್ಯಕ್ಷ ಎ.ಆರ್ ಅಬ್ಬಾಸ್, ಉಪಾಧ್ಯಕ್ಷ ಇಮ್ತಿಯಾಝ್ ಕೋಟೆಪುರ, ಕ್ಷೇತ್ರ ಸಮಿತಿ ಸದಸ್ಯ ಶೋಯೆಬ್ ಉಳ್ಳಾಲ್, ಮುಸ್ಲಿಂ ಒಕ್ಕೂಟ ಅಧ್ಯಕ್ಷ ಇಸ್ಮಾಯಿಲ್, ನಗರಸಭೆ ಸದಸ್ಯರಾದ ಝರೀನಾ ಬಾನು, ಖಮರುನ್ನೀಸಾ ನಿಝಾಮ್, ರಮೀಝ್, ಅಝ್ಗರ್, ಶೈನಾಝ್ ಅಕ್ರಮ್, ರುಖ್ಯ ಇಕ್ಬಾಲ್ ಮೊದಲಾದವರು ಉಪಸ್ಥಿತರಿದ್ದರು.
            
            
            Mangalore SDPI members protest warns Mla UT Khader as Riyaz farangipete to contest from ullal.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm