ಬ್ರೇಕಿಂಗ್ ನ್ಯೂಸ್
22-10-20 09:35 pm Mangalore reporter ಕರಾವಳಿ
ಮಂಗಳೂರು, ಅಕ್ಟೋಬರ್ 22 : ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ವಿವಿಧ ಜಾತಿಗಳ ಅಭಿವೃದ್ಧಿ ನಿಗಮದಡಿ ಸಾಲ ಸೌಲಭ್ಯಕ್ಕೆ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.
ಉಪ್ಪಾರ ಜನಾಂಗ 2 (1.5 ಲಕ್ಷ ), ವಿಶ್ವಕರ್ಮ 12 (6 ಲಕ್ಷ), ಸವಿತಾ ಸಮಾಜ 12 (6 ಲಕ್ಷ ), ಮಡಿವಾಳ ಸಮಾಜ 143, ಅಂಬಿಗರ 117 (58.5 ಲಕ್ಷ) ಮಂದಿಯನ್ನು ಫಲಾನುಭವಿಗಳಾಗಿ ಆಯ್ಕೆ ಮಾಡಲಾಯಿತು. ವಿಶ್ವಕರ್ಮ ಸಮುದಾಯದಿಂದ 341 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿತ್ತು. ಆದರೆ ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಜಿಲ್ಲೆಗೆ 6 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದ್ದರಿಂದ 12 ಮಂದಿ ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಲಾಯ್ತು. ಮಡಿವಾಳ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ 72 ಲಕ್ಷ ರೂ. ಅನುದಾನ ಬಂದಿದ್ದು, ಅರ್ಜಿ ಸಲ್ಲಿಕೆ ಮಾಡಿದ್ದ 143 ಮಂದಿಗೂ ಸಾಲ ಯೋಜನೆಗ ಪರಿಗಣಿಸಲಾಯ್ತು.
ವಿಶ್ವಕರ್ಮ ಸಮುದಾಯದಿಂದ ಅತಿ ಹೆಚ್ಚು 341 ಅರ್ಜಿಗಳು ಬಂದಿದ್ದವು. ಪ್ರತಿ ವರ್ಷ ಈ ಸಮುದಾಯಕ್ಕೆ ಅನುದಾನ ಕಡಿಮೆ ಬರುತ್ತಿರುವುದರಿಂದ ಫಲಾನುಭವಿಗಳ ಆಯ್ಕೆ ಕಗ್ಗಂಟಾಗಿದೆ. ಹೀಗಾಗಿ ಬಂಟ್ವಾಳ, ಬೆಳ್ತಂಗಡಿ ಹೀಗೆ ದೂರದ ಪ್ರದೇಶಗಳಿಂದ ಬಂದಿದ್ದ ಜನರು ತಮಗೆ ಸೌಲಭ್ಯ ಸಿಗದಿರುವ ವಿಚಾರದಲ್ಲಿ ಅಧಿಕಾರಿಗಳನ್ನು ಶಪಿಸುತ್ತಾ ಮರಳಿದರು.
ಈ ಬಗ್ಗೆ ಅಧಿಕಾರಿಗಳ ಬಳಿ ಪ್ರಶ್ನೆ ಮಾಡಿದಾಗ, ಅನುದಾನ ಬಂದ ಹಣದಲ್ಲಿ ನಾವು ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡುತ್ತೇವೆ. ಹಣ ಕಡಿಮೆ ಬಂದಲ್ಲಿ ನಾವು ಏನೂ ಮಾಡಲು ಬರುವುದಿಲ್ಲ. ಪ್ರತಿ ವರ್ಷದ ಅರ್ಜಿಗಳನ್ನು ಮುಂದಿನ ಬಾರಿಗೆ ಸೇರ್ಪಡೆ ಮಾಡುತ್ತೇವೆ. ಲಾಟರಿ ಎತ್ತುವ ದಿನ ಎಲ್ಲರಿಗೂ ಸಂದೇಶ ಕಳಿಸಿ, ಬರಲು ಹೇಳುತ್ತೇವೆ ಎಂದು ತಿಳಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm