ಬ್ರೇಕಿಂಗ್ ನ್ಯೂಸ್
22-10-20 09:35 pm Mangalore reporter ಕರಾವಳಿ
ಮಂಗಳೂರು, ಅಕ್ಟೋಬರ್ 22 : ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ವಿವಿಧ ಜಾತಿಗಳ ಅಭಿವೃದ್ಧಿ ನಿಗಮದಡಿ ಸಾಲ ಸೌಲಭ್ಯಕ್ಕೆ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.
ಉಪ್ಪಾರ ಜನಾಂಗ 2 (1.5 ಲಕ್ಷ ), ವಿಶ್ವಕರ್ಮ 12 (6 ಲಕ್ಷ), ಸವಿತಾ ಸಮಾಜ 12 (6 ಲಕ್ಷ ), ಮಡಿವಾಳ ಸಮಾಜ 143, ಅಂಬಿಗರ 117 (58.5 ಲಕ್ಷ) ಮಂದಿಯನ್ನು ಫಲಾನುಭವಿಗಳಾಗಿ ಆಯ್ಕೆ ಮಾಡಲಾಯಿತು. ವಿಶ್ವಕರ್ಮ ಸಮುದಾಯದಿಂದ 341 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿತ್ತು. ಆದರೆ ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಜಿಲ್ಲೆಗೆ 6 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದ್ದರಿಂದ 12 ಮಂದಿ ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಲಾಯ್ತು. ಮಡಿವಾಳ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ 72 ಲಕ್ಷ ರೂ. ಅನುದಾನ ಬಂದಿದ್ದು, ಅರ್ಜಿ ಸಲ್ಲಿಕೆ ಮಾಡಿದ್ದ 143 ಮಂದಿಗೂ ಸಾಲ ಯೋಜನೆಗ ಪರಿಗಣಿಸಲಾಯ್ತು.
ವಿಶ್ವಕರ್ಮ ಸಮುದಾಯದಿಂದ ಅತಿ ಹೆಚ್ಚು 341 ಅರ್ಜಿಗಳು ಬಂದಿದ್ದವು. ಪ್ರತಿ ವರ್ಷ ಈ ಸಮುದಾಯಕ್ಕೆ ಅನುದಾನ ಕಡಿಮೆ ಬರುತ್ತಿರುವುದರಿಂದ ಫಲಾನುಭವಿಗಳ ಆಯ್ಕೆ ಕಗ್ಗಂಟಾಗಿದೆ. ಹೀಗಾಗಿ ಬಂಟ್ವಾಳ, ಬೆಳ್ತಂಗಡಿ ಹೀಗೆ ದೂರದ ಪ್ರದೇಶಗಳಿಂದ ಬಂದಿದ್ದ ಜನರು ತಮಗೆ ಸೌಲಭ್ಯ ಸಿಗದಿರುವ ವಿಚಾರದಲ್ಲಿ ಅಧಿಕಾರಿಗಳನ್ನು ಶಪಿಸುತ್ತಾ ಮರಳಿದರು.
ಈ ಬಗ್ಗೆ ಅಧಿಕಾರಿಗಳ ಬಳಿ ಪ್ರಶ್ನೆ ಮಾಡಿದಾಗ, ಅನುದಾನ ಬಂದ ಹಣದಲ್ಲಿ ನಾವು ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡುತ್ತೇವೆ. ಹಣ ಕಡಿಮೆ ಬಂದಲ್ಲಿ ನಾವು ಏನೂ ಮಾಡಲು ಬರುವುದಿಲ್ಲ. ಪ್ರತಿ ವರ್ಷದ ಅರ್ಜಿಗಳನ್ನು ಮುಂದಿನ ಬಾರಿಗೆ ಸೇರ್ಪಡೆ ಮಾಡುತ್ತೇವೆ. ಲಾಟರಿ ಎತ್ತುವ ದಿನ ಎಲ್ಲರಿಗೂ ಸಂದೇಶ ಕಳಿಸಿ, ಬರಲು ಹೇಳುತ್ತೇವೆ ಎಂದು ತಿಳಿಸಿದ್ದಾರೆ.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm