ಬ್ರೇಕಿಂಗ್ ನ್ಯೂಸ್
03-03-23 10:11 pm Mangalore Correspondent ಕರಾವಳಿ
ಉಳ್ಳಾಲ, ಮಾ.3 : ಎಸ್ ಡಿಪಿಐ ಮಂಗಳೂರು(ಉಳ್ಳಾಲ) ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾಗಿ ಉಳ್ಳಾಲಕ್ಕೆ ಮೊದಲ ಬಾರಿ ಎಂಟ್ರಿ ನೀಡಿದ ತಾಂಟ್ರೆ ಖ್ಯಾತಿಯ ರಿಯಾಝ್ ಫರಂಗಿಪೇಟೆಯನ್ನ ರ್ಯಾಲಿಯಲ್ಲಿ ಕರೆತರಲು ಪೊಲೀಸರು ಅವಕಾಶ ನೀಡದಿದ್ದರೂ ಪಕ್ಷದ ಕಾರ್ಯಕರ್ತರು ನೆಚ್ಚಿನ ಅಭ್ಯರ್ಥಿಗೆ ಅದ್ಧೂರಿ ಸ್ವಾಗತ ನೀಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು(ಉಳ್ಳಾಲ) ಕ್ಷೇತ್ರದ ಎಸ್ ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ಘೋಷಣೆಯಾದ ರಿಯಾಝ್ ಫರಂಗಿಪೇಟೆ ಶುಕ್ರವಾರ ಮೊದಲ ಬಾರಿಗೆ ಉಳ್ಳಾಲಕ್ಕೆ ಆಗಮಿಸಿದ್ದು ಕಾರ್ಯಕರ್ತರು ಕಲ್ಲಾಪಿನಿಂದ ಉಳ್ಳಾಲದ ವರೆಗೆ ರಿಯಾಝ್ ಅವರನ್ನ ರ್ಯಾಲಿಯಲ್ಲಿ ಕರೆದೊಯ್ಯಲು ಯೋಜನೆ ರೂಪಿಸಿದ್ದರು. ಕೊನೆ ಕ್ಷಣದಲ್ಲಿ ಪೊಲೀಸ್ ಇಲಾಖೆ ರ್ಯಾಲಿಗೆ ಅನುಮತಿ ನಿರಾಕರಿಸಿದರೂ ಅಭ್ಯರ್ಥಿಗೆ ಎಸ್ ಡಿಪಿಐ ಕಾರ್ಯಕರ್ತರು ಉಳ್ಳಾಲದಲ್ಲಿ ಅದ್ಧೂರಿ ಸ್ವಾಗತ ನೀಡಿದ್ದಾರೆ.
ಉಳ್ಳಾಲದ ಅಬ್ಬಕ್ಕ ವೃತ್ತದಿಂದ ಕಾರ್ಯಕರ್ತರು ರಿಯಾಝ್ ಪರಂಗಿಪೇಟೆಯನ್ನ ಅದ್ಧೂರಿ ಸ್ವಾಗತ ಕೋರಿ ನಗರಸಭೆ ಕಚೇರಿ ಮುಂಭಾಗದ ಪಕ್ಷದ ಕಚೇರಿಗೆ ಬರಮಾಡಿಕೊಂಡರು.


ಈ ವೇಳೆ ಮಾತನಾಡಿದ ರಿಯಾಝ್ ಪರಂಗಿಪೇಟೆ ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅವಕಾಶ ಕಲ್ಪಿಸಿದ ಪಕ್ಷದ ಎಲ್ಲಾ ನಾಯಕರು, ತಳಮಟ್ಟದಲ್ಲಿ ಹೆಸರು ಸೂಚಿಸಿದ ಕಾರ್ಯಕರ್ತರುಗಳಿಗೆ ಕೃತಜ್ಞತೆಗಳು. ಬೇರೆ ಪಕ್ಷದವರಿಗೆ ಚುನಾವಣೆ ಅಂದರೆ ಪ್ರತಿಷ್ಠೆ, ಸ್ಪರ್ಧೆ, ವ್ಯಾಪಾರ, ಸಂಪತ್ತು ಏರಿಕೆ ಮಾಡುವ ವ್ಯವಸ್ಥೆ. ಸಂವಿಧಾನದ ಆಶಯದ ಜತೆಗೆ ಆಟವಾಡುವ ವಸ್ತುವಾಗಿರಬಹುದು. ಆದರೆ ನಮಗೆ ಚುನಾವಣೆ ಅಂದರೆ ಪ್ರತಿಷ್ಠೆಯಲ್ಲ. ಶೋಷಿತ ಸಮುದಾಯ, ಅನ್ಯಾಯ, ಅಕ್ರಮಕ್ಕೆ ಒಳಗಾದವರಿಗೆ ಸಾಮಾಜಿಕ ನ್ಯಾಯ ತೆಗೆಸಿಕೊಡಲು ರಾತ್ರಿ ಹಗಲು ದುಡಿಯುವ ವೇದಿಕೆಯಾಗಿದೆ ಎಂದರು.

ಉಳ್ಳಾಲದ ಶಾಸಕರನ್ನು ಬೊಟ್ಟು ಮಾಡಿ ಅವರ ವಿರುದ್ಧ ನಮ್ಮ ಸ್ಪರ್ಧೆ ಎಂದು ಬಿಂಬಿಸಲಾಗುತ್ತಿದೆ. ನಮ್ಮ ಸ್ಪರ್ಧೆ ಫ್ಯಾಸಿಸ್ಟ್ ಮನಸ್ಥಿತಿ ಮತ್ತು ತಾರತಮ್ಯ ನೀತಿಯ ವಿರುದ್ಧವೇ ಹೊರತು ಯಾವುದೇ ವ್ಯಕ್ತಿಯ ವಿರುದ್ಧವಲ್ಲ ಎಂದರು. ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ಹಾಗೂ ಚುನಾವಣಾ ಉಸ್ತುವಾರಿ ಅತಾವುಲ್ಲ ಜೋಕಟ್ಟೆ, ನವಾಝ್ ಉಳ್ಳಾಲ್, ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು, ಕ್ಷೇತ್ರ ಸಮಿತಿ ಪ್ರಮುಖರಾದ ಇರ್ಷಾದ್ ಅಜ್ಜಿನಡ್ಕ, ಅಬ್ಬಾಸ್ ಎ.ಆರ್ ಮೊದಲಾದವರು ಉಪಸ್ಥಿತರಿದ್ದರು.
Mangalore SDPI candidate grand entry in Ullal, grand welcome by member's. Police cancel rally.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm