ಬ್ರೇಕಿಂಗ್ ನ್ಯೂಸ್
05-03-23 11:25 pm Mangalore Correspondent ಕರಾವಳಿ
ಮಂಗಳೂರು, ಮಾ.5 : ಬಿಹಾರದಲ್ಲಿ ಪ್ರಧಾನಿ ಮೋದಿ ಆಗಮನ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ.
ನಾಲ್ಕು ತಂಡಗಳಲ್ಲಾಗಿ ಅಧಿಕಾರಿಗಳು ದಾಳಿ ನಡೆಸಿದ್ದು ವಿಧ್ವಂಸಕ ಕೃತ್ಯಕ್ಕೆ ಹಣಕಾಸು ನೆರವು ಒದಗಿಸಿದ ಆರೋಪದಲ್ಲಿ ಐವರನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ನಂದಾವರದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್ ಮತ್ತು ನೌಫಲ್ ಎಂಬವರ ಮನೆಗೆ ದಾಳಿ ನಡೆಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಇವರು ಹಲವರ ಬ್ಯಾಂಕ್ ಖಾತೆಗಳಿಗೆ ನಿರಂತರ ಹಣ ರವಾನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ. ಇವರ ಬ್ಯಾಂಕ್ ವ್ಯವಹಾರದ ಮೇಲೆ ಹಲವು ಸಮಯದಿಂದ ಅಧಿಕಾರಿಗಳು ಕಣ್ಣಿಟ್ಟಿದ್ದರು. ಇದೇ ವೇಳೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಳೆದ 2022ರ ಜುಲೈ 12ರಂದು ಬಿಹಾರದ ಪಾಟ್ನಾಕ್ಕೆ ಪ್ರಧಾನಿ ಭೇಟಿ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಪ್ಲಾನ್ ರೂಪಿಸಲಾಗಿತ್ತು. ಪಾಟ್ನಾದ ಫುಲ್ವಾರಿ ಶರೀಫ್ ಎಂಬಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳು ಒಟ್ಟು ಸೇರಿದ್ದು ಶಸ್ತ್ರಾಸ್ತ್ರ ತರಬೇತಿ ನಡೆಸುತ್ತಿದ್ದುದು ಪತ್ತೆಯಾಗಿತ್ತು. ಅಲ್ಲದೆ, 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡಬೇಕೆಂಬ ಕರಪತ್ರಗಳು, ಪುಸ್ತಕಗಳು ದೊರಕಿದ್ದವು. ಪ್ರಕರಣದಲ್ಲಿ ಬಿಹಾರ ಸೇರಿ ದೇಶದ ಹಲವು ಕಡೆ ದಾಳಿ ನಡೆಸಿರುವ ಅಧಿಕಾರಿಗಳು ಹಲವರನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಬಾರಿ ಮಂಗಳೂರಿನ ಎಸ್ಡಿಪಿಐ ನಾಯಕ ರಿಯಾಜ್ ಪರಂಗಿಪೇಟೆ ಅವರನ್ನೂ ಇದೇ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
Conspiracy to attack PM’s rally at Bihar in 2022, four from Bantwal in Mangalore arrested by NIA officers. The arrested have said to make financial support. Bihar police had revealed that the module had plans to disrupt a rally of PM Modi in Bihar.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am