ಬ್ರೇಕಿಂಗ್ ನ್ಯೂಸ್
06-03-23 06:02 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.6 : ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಅಶೋಕ ಪೂಜಾರಿ ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಧರ್ಮಸ್ಥಳಕ್ಕೆ ಆಗಮಿಸಿ, ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ.
ತನ್ನ ವಿರುದ್ಧ ಕೊನೆ ಕ್ಷಣದಲ್ಲಿ ಹಣ ಪಡೆದು ಸುಮ್ಮನಾಗುತ್ತಾನೆ ಎಂಬ ಪ್ರತಿಪಕ್ಷದ ಕೆಲವರ ಆರೋಪದಿಂದ ನೊಂದು ಈ ಬಾರಿ ಅಶೋಕ್ ಪೂಜಾರಿ ಕುಟುಂಬ ಸಮೇತ ಬಂದು ಚುನಾವಣೆ ಮೊದಲೇ ಆಣೆ ಪ್ರಮಾಣ ಮಾಡಿದ್ದಾರೆ. 2008 ಹಾಗೂ 2013ರ ಚುನಾವಣೆಯಲ್ಲಿ ಜೆ.ಡಿ.ಎಸ್ ಪಕ್ಷದಿಂದ ಸ್ಪರ್ಧಿಸಿದ್ದೆ. 2018 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದೆ. 2019ರಲ್ಲಿ ಜಾರಕಿಹೊಳಿ ಬಿಜೆಪಿಗೆ ಬಂದು ಉಪ ಚುನಾವಣೆ ನಡೆದಾಗ ಜೆ.ಡಿ.ಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದೆ. ಈ ಬಾರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುತ್ತೇನೆ ಎಂದರು.

ಪದೇ ಪದೇ ಪಕ್ಷ ಬದಲಾವಣೆ ಯಾಕೆ ಮಾಡುತ್ತೇನೆಂದರೆ, ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಗೆಲ್ಲೋದು ಹಣ ಬಲ ಮತ್ತು ತೋಳ್ಬಲದಿಂದ. ಇದನ್ನು ತೊಲಗಿಸಲು ಸಮರ್ಥ ಪಕ್ಷವೇ ಬೇಕು. ನಮ್ಮದು ಮಧ್ಯಮ ವರ್ಗದ ಕುಟುಂಬವಾಗಿದ್ದರಿಂದ ಆರೋಪ ಎದುರಿಸುತ್ತೇನೆ. ನಾನು ಜನರೊಂದಿಗೆ ಬೆರೆತು ಚುನಾವಣೆ ಎದುರಿಸುವ ಅನಿವಾರ್ಯತೆ ಇದೆ. ಈ ಹಿಂದೆ ಮೂರು ಬಾರಿ ಸ್ಪರ್ಧಿಸುವಾಗಲೂ ಚುನಾವಣೆಯ ಕೊನೆಯ ಘಳಿಗೆಯಲ್ಲಿ ನನ್ನ ವಿರುದ್ದ ವಿರೋಧ ಪಕ್ಷದವರು ಹಾಗೂ ನನ್ನ ಜತೆ ಇದ್ದವರೇ ಗುಲ್ಲು ಎಬ್ಬಿಸಿದ್ದರು.
ಅಶೋಕ್ ಪೂಜಾರ ಚುನಾವಣೆ ಕೊನೆಯ ವರೆಗೂ ಹೋರಾಟ ಮಾಡುತ್ತಾನೆ. ಕೊನೆಯ ಮೂರು ದಿನಗಳಲ್ಲಿ ಎದುರಾಳಿಗಳೊಂದಿಗೆ ಅಂದರೆ ನನ್ನ ಪ್ರತಿಸ್ಪರ್ಧಿ ರಮೇಶ್ ಜಾರಕಿಹೊಳಿ ಜೊತೆಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಾನೆ ಎಂಬ ಆರೋಪ ನನ್ನ ಮೇಲಿದೆ. 2008 ರಲ್ಲಿ ಪ್ರಾರಂಭವಾದ ಆರೋಪ 2023 ರ ಚುನಾವಣೆಗೂ ಮಾಡುತ್ತಿದ್ದಾರೆ ಎಂದರು.
40 ವರ್ಷಗಳಿಂದ ನೈತಿಕತೆಯ ರಾಜಕಾರಣ ಮಾಡುತ್ತಾ ಬಂದವನು. ಅದನ್ನು ನನ್ನ ಕ್ಷೇತ್ರದ ಮತದಾರರಿಗೆ ತಿಳಿಸಬೇಕು ಎಂಬ ಕಾರಣದಿಂದ ಬಂದಿದ್ದೇನೆ. ದೈವೀಶಕ್ತಿ ಮಂಜುನಾಥನ ಮುಂದೆ ನನ್ನ ಕ್ಷೇತ್ರದ ಮತದಾರರ ಎದುರಿನಲ್ಲಿ ರಾಜಕೀಯ ಜೀವನದಲ್ಲಿ ಎಂದೂ ಎದುರಾಳಿಯಿಂದ ದುಡ್ಡು ತೆಗೆದುಕೊಂಡು ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂಬುದಾಗಿ ಮಂಜುನಾಥ ದೇವರ ಮುಂದೆ ಆಣೆ ಪ್ರಮಾಣ ಮಾಡಿದ್ದೇನೆ, ನಾವು ಒಟ್ಟು ಐದು ಮಂದಿ ಕಾಂಗ್ರೇಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದೇವೆ. ನನ್ನ ಹೋರಾಟ ಹಾಗೂ ಅನುಭವದ ಹಿನ್ನೆಲೆಯಲ್ಲಿ ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದು ಹೇಳಿದರು.
Ashok Pujari takes oath Dharmasthala after he was alleged of taking money from Ramesh Jarkiholi.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm