ಬ್ರೇಕಿಂಗ್ ನ್ಯೂಸ್
08-03-23 11:10 pm Mangalore Correspondent ಕರಾವಳಿ
ಮಂಗಳೂರು, ಮಾ.8 : ನಗರದ ಬಲ್ಮಠದ ಸಿಎಸ್ಐ ಕರ್ನಾಟಕ ಧರ್ಮಪ್ರಾಂತ (ಬಿಷಪ್ ಹೌಸ್) ಕಚೇರಿಯಲ್ಲಿ ಬಿಷಪ್ ಅವರ ಸೆಕ್ರೆಟರಿಯಾಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹತ್ತು ವರ್ಷಗಳಿಂದ ಸೆಕ್ರೆಟರಿಯಾಗಿದ್ದ ಮಹಿಳೆಯನ್ನು ಬಿಷಪ್ ಹೌಸ್ ಖಜಾಂಚಿಯಾಗಿರುವ ವಿನ್ಸೆಂಟ್ ಪಾಲನ್ನ ಎಂಬವರು ನಾಲ್ಕು ವರ್ಷಗಳಿಂದ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಬಿಷಪ್ ಹೌಸ್ ನಲ್ಲಿ ಕಾನೂನು ಸಲಹೆಗಾರರೂ ಆಗಿರುವ ಫಾದರ್ ನೋಯಲ್ ಕರ್ಕಡ ಮಹಿಳೆಯನ್ನು ಸೆಕ್ಸ್ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಬಗ್ಗೆ ದೂರಲಾಗಿದೆ.




ಇದಲ್ಲದೆ, ಬಿಷಪ್ ಹೌಸ್ ಆಡಳಿತ ನೋಡಿಕೊಳ್ಳುವ ಕರುಣಾಕರ ಕುಂದರ, ಮನೋಹರ ಅಮ್ಮನ್ನ, ಸುಜಾತ, ವಿಲಿಯಂ ಕೇರಿ ಎಂಬವರು ತನ್ನ ಬಗ್ಗೆ ತೇಜೋವಧೆ ಆಗುವ ರೀತಿ ವರ್ತಿಸಿದ್ದಾರೆಂದು ದೂರಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಆರು ಮಂದಿ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ವಿನ್ಸೆಂಟ್ ಪಾಲನ್ನ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದುದಲ್ಲದೆ, ಬೇರೆಯವರ ಜೊತೆಗೂ ಲೈಂಗಿಕ ಕ್ರಿಯೆಗೆ ಸಹಕರಿಸಲು ಒತ್ತಾಯಿಸುತ್ತಿದ್ದ. ಆರೋಪಿಗಳು ಪ್ರಭಾವಿಗಳಾಗಿರುವುದರಿಂದ ಹೆದರಿಕೆಯಿಂದ ಈವರೆಗೆ ದೂರನ್ನು ನೀಡಿರಲಿಲ್ಲ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ಅತ್ಯಾಚಾರ, ಕಿರುಕುಳ, ಲೈಂಗಿಕ ಶೋಷಣೆ, ಜೀವ ಬೆದರಿಕೆ ಒಡ್ಡಿದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Balmatta CSI church Bishop secretary alleged of sexual harassment, FIR filed on six including church priest. Balmatta CSI Bishop secretary alleges of sexual and mental harassment by Vincent Palanna who is the treasurer of CSI Diocesan office in Balmatta and Rev Fr Noel P Karkada who is a priest at CSI Anglican St Paul’s Church at Hampankatta in Mangalore. The woman has sought help from Stanly Kv , Mysore who is the Founder Director at Odanadi Seva Samsthe. A complaint has been filed at Woman police station in Mangalore.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm