ಬ್ರೇಕಿಂಗ್ ನ್ಯೂಸ್
09-03-23 06:26 pm Mangalore Correspondent ಕರಾವಳಿ
ಬಂಟ್ವಾಳ, ಮಾ.9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಾರ್ಷಿಕ ಪರೀಕ್ಷೆ ಆರಂಭದ ದಿನವೇ ಪರೀಕ್ಷೆಗೆ ತೆರಳದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಬಾಳ್ತಿಲದಲ್ಲಿ ನಡೆದಿದೆ.
ಕಡಬ ರಾಮಕುಂಜ ಶಾಲೆಯಲ್ಲಿ ಪ್ರಿನ್ಸಿಪಾಲ್ ಆಗಿರುವ ಬಾಳ್ತಿಲ ಚಂದ್ರಶೇಖರ ಗೌಡ ಮತ್ತು ಶಿಕ್ಷಕಿ ಸೌಮ್ಯಾ ದಂಪತಿಯ ಪುತ್ರಿ ವೈಷ್ಣವಿ ಕೆ.ಸಿ.(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ವೈಷ್ಣವಿ ಇಂದು ಬೆಳಗ್ಗೆ ಪರೀಕ್ಷೆಗೆಂದು ಕಲ್ಲಡ್ಕದ ಕಾಲೇಜಿಗೆ ತೆರಳಿದ್ದಳು. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಶಾಲೆಯಿಂದ ಬೆಳಗ್ಗೆ 9.30ರ ಸುಮಾರಿಗೆ ಏನೋ ಮರೆತು ಬಂದಿದ್ದೇನೆಂದು ಹೇಳಿ ಮನೆಗೆ ಹಿಂತಿರುಗಿದ್ದಳು. ಮಗಳು ಶಾಲೆಯಿಂದ ಮನೆಗೆ ತೆರಳಿದ ಬಗ್ಗೆ ತಿಳಿದ ತಾಯಿ ಪಕ್ಕದ ಮನೆಯವರಿಗೆ ತಿಳಿಸಿದ್ದು ಒಮ್ಮೆ ನೋಡಿ ಬರುವಂತೆ ಹೇಳಿದ್ದರು.
ಪಕ್ಕದ ಮನೆಯ ಮಹಿಳೆ ಮನೆ ಕಡೆ ನೋಡಿದಾಗ ಬಾಗಿಲು ಹಾಕಿದ ರೀತಿಯಲ್ಲೇ ಇತ್ತು. ಬೀಗ ಹಾಕಿದ್ದರಿಂದ ತಾಯಿಗೆ ತಿಳಿಸಿದ್ದು ಆನಂತರ ಅವರು ಬಂದು ನೋಡಿದಾಗ ಮಗಳು ವೈಷ್ಣವಿ ಮನೆ ಹಾಲ್ ನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮಗಳಿಗೆ ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಯಾಕಾಗಿ ಈ ಕೃತ್ಯ ಎಸಗಿದ್ದಾರೆಂದು ತಿಳಿದಿಲ್ಲ ಎಂದು ತಾಯಿ ಅಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಹೆಣ್ಮಕ್ಕಳಿದ್ದು ಹಿರಿಯಾಕೆ ವೈಷ್ಣವಿ.
Mangalore Kalladka 17 year old PUC girl student commits suicide on the day of her exam.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm