ಬ್ರೇಕಿಂಗ್ ನ್ಯೂಸ್
09-03-23 07:00 pm Mangalore Correspondent ಕರಾವಳಿ
ಮಂಗಳೂರು, ಮಾ.9: ಕರಾವಳಿಯಲ್ಲಿ ಬಿಸಿಲ ಝಳ ಗರಿಷ್ಠಕ್ಕೇರುತ್ತಿದ್ದು, ಮಂಗಳೂರಿನಲ್ಲಿ ದೇಶದಲ್ಲೇ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಮಂಗಳೂರಿನ ಪಣಂಬೂರಿನಲ್ಲಿ ಮಾ.9ರ ಗುರುವಾರ ಮಧ್ಯಾಹ್ನ ಗರಿಷ್ಠ 38.8 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ದಾಖಲಾಗಿದ್ದು ಇದು ಈ ಸಾಲಿನಲ್ಲಿ ದೇಶದಲ್ಲಿ ದಾಖಲಾದ ಗರಿಷ್ಠ ಉಷ್ಣ ವಾತಾವರಣ ಎಂದು ಹವಾಮಾನ ಇಲಾಖೆ ದಾಖಲಿಸಿದೆ. ಇದೇ ವೇಳೆ, ರಾಜ್ಯ ಹವಾಮಾನ ಇಲಾಖೆಯಿಂದ ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ನಿರ್ದಿಷ್ಟ ಭಾಗಗಳಲ್ಲಿ ಅತಿ ಹೆಚ್ಚು ಉಷ್ಣಾಂಶ ಎದುರಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಮಂಗಳೂರಿನ ಪಣಂಬೂರಿನಲ್ಲಿ 38.8 ಡಿಗ್ರಿ, ಕಾರವಾರದಲ್ಲಿ 38.6 ಡಿಗ್ರಿ, ಬ್ರಹ್ಮಾವರದಲ್ಲಿ 38.4 ಡಿಗ್ರಿ, ಹೊನ್ನಾವರದಲ್ಲಿ 38.2 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಗರಿಷ್ಠ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಭಾರತೀಯ ಹವಾಮಾನ ಇಲಾಖೆಯಿಂದ ದಕ್ಷಿಣ ಕೊಂಕಣ, ಗೋವಾ, ಕರ್ನಾಟಕದ ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ಉಷ್ಣಾಂಶದ ಬಿಸಿ ಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮಾ.9ರಿಂದ 13ರ ವರೆಗೆ 5 ದಿನಗಳ ಎಚ್ಚರಿಕೆ ನೀಡಲಾಗಿದ್ದು, ಬಿಸಿ ಗಾಳಿಯಿಂದಾಗಿ ಜನಜೀವನಕ್ಕೆ ತೊಂದರೆಯಾಗುವ ಸಾಧ್ಯತೆ ಬಗ್ಗೆ ಸೂಚಿಸಲಾಗಿದೆ.


ದೇಶದಲ್ಲೇ ಗರಿಷ್ಠ ಉಷ್ಣಾಂಶ
ಇದಲ್ಲದೆ, ಮಂಗಳೂರಿನಲ್ಲಿ ದಾಖಲಾಗಿರುವ 38.8 ಡಿಗ್ರಿ ಉಷ್ಣತೆ ದೇಶದಲ್ಲೇ ಗರಿಷ್ಠ ಎಂದು ಸೂಚಿಸಲಾಗಿದೆ. ಜಮ್ಮು ಡಿವಿಶನ್ ಮತ್ತು ಕರ್ನಾಟಕದ ಕರಾವಳಿಯಲ್ಲಿ ಎಂದಿಗಿಂತ 4ರಿಂದ 6 ಡಿಗ್ರಿ ಹೆಚ್ಚುವರಿ ಉಷ್ಣಾಂಶ ಇರಲಿದೆ. ಗೋವಾ, ಕರ್ನಾಟಕ ಕರಾವಳಿ, ಗುಜರಾತಿನ ಕಛ್, ವಿದರ್ಭ, ಸೌರಾಷ್ಟ್ರ ಭಾಗದಲ್ಲಿ ಕೆಲವೆಡೆ 37ರಿಂದ 39 ಡಿಗ್ರಿ ಉಷ್ಣತೆ ದಾಖಲಾಗಿದೆ. ಇದೇ ವೇಳೆ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಒಡಿಶಾದಲ್ಲಿ 35ರಿಂದ 37 ಡಿಗ್ರಿ ಉಷ್ಣಾಂಶ ಕಂಡುಬಂದಿದೆ.
Highest temperature of 38.8 deg C in the country is recorded in the city for the second time on Wednesday. Public are concerned about the soaring mercury day-by-day. IMD has warned of rise of about two to three degrees in temperature in coming days.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm