ಬ್ರೇಕಿಂಗ್ ನ್ಯೂಸ್
10-03-23 06:50 pm Mangalore Correspondent ಕರಾವಳಿ
ಉಳ್ಳಾಲ, ಮಾ.10 : ಹೆದ್ದಾರಿ ಬದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದು ಮರ, ಗಿಡಗಂಟಿಗಳು ಹೊತ್ತಿ ಉರಿದಿದ್ದು ವಸತಿ ಪ್ರದೇಶಕ್ಕೆ ಬೆಂಕಿ ವ್ಯಾಪಿಸುತ್ತಿರುವುದನ್ನ ಕಂಡ ಹೆದ್ದಾರಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸ್ ಟ್ಯಾಂಕರ್ ನೀರು ತರಿಸಿ ಬೆಂಕಿಯನ್ನ ನಂದಿಸಿದ ಘಟನೆ ಕೋಟೆಕಾರು, ಬೀರಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರಿನ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸ್ಥಳಕ್ಕೆ ಬಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮರ್ ನಿಂದ ಅವಘಡ ನಡೆದಿಲ್ಲ , ಯಾರೋ ಸಿಗರೇಟ್ ಎಸೆದೋ ಅಥವಾ ಬಿಸಿಲಿನ ಝಲಕ್ಕೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಬೆಂಕಿಯ ಕೆನ್ನಾಲಿಗೆ ವಿಶಾಲ ಪ್ರದೇಶದ ಮರ, ಗಿಡ ಗಂಟೆಗಳನ್ನ ಸುಟ್ಟು ಸಮೀಪದಲ್ಲಿದ್ದ ಒಂಟಿ ಮನೆ ವರೆಗೂ ವ್ಯಾಪಿಸತೊಡಗಿತ್ತು. ಈ ವೇಳೆ ಹೆದ್ದಾರಿ ಗಸ್ತು ವಾಹನದಲ್ಲಿದ್ದ ಸಂಚಾರಿ ಠಾಣಾ ಎಎಸ್ಸೈ ಸಂತೋಷ್ ಅವರು ಅಗ್ನಿಶಾಮಕ ದಳಕ್ಕೆ ಎರಡು, ಮೂರು ಬಾರಿ ಫೋನಾಯಿಸಿದರೂ ಸಕರಾತ್ಮಕ ಸ್ಪಂದನೆ ದೊರಕಿಲ್ಲ. ಕೂಡಲೇ ಸ್ಥಳೀಯರಾದ ಗಣೇಶ್ ಭಟ್ ಎಂಬವರು ದೊಡ್ಡ ನೀರಿನ ಟ್ಯಾಂಕರನ್ನು ಒದಗಿಸಿದ್ದಾರೆ. ಟ್ರಾಫಿಕ್ ಕಾನ್ಸ್ಟೇಬಲ್ ನಾಗಪ್ಪ ಗಡದ ಅವರು ಭಾರದ ಫೈಪನ್ನ ಎತ್ತಿ ನೀರು ಹಾಯಿಸಿ ಬೆಂಕಿಯನ್ನ ನಂದಿಸಿದ್ದಾರೆ. ನಾಗಪ್ಪ ಅವರಿಗೆ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ತುರ್ತು ಸೇವೆ ಲಭಿಸದಿದ್ದರೂ ಟ್ರಾಫಿಕ್ ಪೊಲೀಸರೇ ಬೆಂಕಿ ನಂದಿಸಿದ್ದನ್ನ ಸ್ಥಳೀಯ ಕೌನ್ಸಿಲರ್ ರಾಘವ ಗಟ್ಟಿ ಸೇರಿದಂತೆ ನೆರೆದಿದ್ದ ಜನರು ಪ್ರಶಂಸಿಸಿದ್ದಾರೆ.
Mangalore Sudden fire from the transcender suspected, plants tree on fire at Kotekar.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm