ಬ್ರೇಕಿಂಗ್ ನ್ಯೂಸ್
10-03-23 06:50 pm Mangalore Correspondent ಕರಾವಳಿ
ಉಳ್ಳಾಲ, ಮಾ.10 : ಹೆದ್ದಾರಿ ಬದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದು ಮರ, ಗಿಡಗಂಟಿಗಳು ಹೊತ್ತಿ ಉರಿದಿದ್ದು ವಸತಿ ಪ್ರದೇಶಕ್ಕೆ ಬೆಂಕಿ ವ್ಯಾಪಿಸುತ್ತಿರುವುದನ್ನ ಕಂಡ ಹೆದ್ದಾರಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸ್ ಟ್ಯಾಂಕರ್ ನೀರು ತರಿಸಿ ಬೆಂಕಿಯನ್ನ ನಂದಿಸಿದ ಘಟನೆ ಕೋಟೆಕಾರು, ಬೀರಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರಿನ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸ್ಥಳಕ್ಕೆ ಬಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮರ್ ನಿಂದ ಅವಘಡ ನಡೆದಿಲ್ಲ , ಯಾರೋ ಸಿಗರೇಟ್ ಎಸೆದೋ ಅಥವಾ ಬಿಸಿಲಿನ ಝಲಕ್ಕೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.




ಬೆಂಕಿಯ ಕೆನ್ನಾಲಿಗೆ ವಿಶಾಲ ಪ್ರದೇಶದ ಮರ, ಗಿಡ ಗಂಟೆಗಳನ್ನ ಸುಟ್ಟು ಸಮೀಪದಲ್ಲಿದ್ದ ಒಂಟಿ ಮನೆ ವರೆಗೂ ವ್ಯಾಪಿಸತೊಡಗಿತ್ತು. ಈ ವೇಳೆ ಹೆದ್ದಾರಿ ಗಸ್ತು ವಾಹನದಲ್ಲಿದ್ದ ಸಂಚಾರಿ ಠಾಣಾ ಎಎಸ್ಸೈ ಸಂತೋಷ್ ಅವರು ಅಗ್ನಿಶಾಮಕ ದಳಕ್ಕೆ ಎರಡು, ಮೂರು ಬಾರಿ ಫೋನಾಯಿಸಿದರೂ ಸಕರಾತ್ಮಕ ಸ್ಪಂದನೆ ದೊರಕಿಲ್ಲ. ಕೂಡಲೇ ಸ್ಥಳೀಯರಾದ ಗಣೇಶ್ ಭಟ್ ಎಂಬವರು ದೊಡ್ಡ ನೀರಿನ ಟ್ಯಾಂಕರನ್ನು ಒದಗಿಸಿದ್ದಾರೆ. ಟ್ರಾಫಿಕ್ ಕಾನ್ಸ್ಟೇಬಲ್ ನಾಗಪ್ಪ ಗಡದ ಅವರು ಭಾರದ ಫೈಪನ್ನ ಎತ್ತಿ ನೀರು ಹಾಯಿಸಿ ಬೆಂಕಿಯನ್ನ ನಂದಿಸಿದ್ದಾರೆ. ನಾಗಪ್ಪ ಅವರಿಗೆ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ತುರ್ತು ಸೇವೆ ಲಭಿಸದಿದ್ದರೂ ಟ್ರಾಫಿಕ್ ಪೊಲೀಸರೇ ಬೆಂಕಿ ನಂದಿಸಿದ್ದನ್ನ ಸ್ಥಳೀಯ ಕೌನ್ಸಿಲರ್ ರಾಘವ ಗಟ್ಟಿ ಸೇರಿದಂತೆ ನೆರೆದಿದ್ದ ಜನರು ಪ್ರಶಂಸಿಸಿದ್ದಾರೆ.
Mangalore Sudden fire from the transcender suspected, plants tree on fire at Kotekar.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm